ಮೈಸೂರು

ಕೋಟೆ | ತಾಯಿಯಿಂದ ಬೇರ್ಪಟ್ಟಿದ್ದ ಆನೆ ಮರಿ ಸಾವು

ಎಚ್.ಡಿ.ಕೋಟೆ : ಕೇರಳ ರಾಜ್ಯದಲ್ಲಿ ತಾಯಿ ಆನೆಯಿಂದ ಬೇರ್ಪಟ್ಟು, ಬಳ್ಳೆ ಆನೆ ಸಾಕಾಣಿಕಾ ಕೇಂದ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಆರೈಕೆಯಲ್ಲಿದ್ದ ಆನೆ ಮರಿ ಅನಾರೋಗ್ಯದಿಂದ ಅಸ್ವಸ್ಥಗೊಂಡು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಒಂದು ತಿಂಗಳಿಂದ ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಯು ಕೇರಳದ ಪುಲ್ವಳ್ಳಿ ಗ್ರಾಮದ ಶಾಲೆಯ ಬಳಿ ಕಾಣಿಸಿಕೊಂಡಿತ್ತು. ನಂತರ ಈ ಮರಿಯನ್ನು ರಕ್ಷಿಸಲಾಗಿತ್ತು. ತಾಯಿ ಆನೆಯ ಬಳಿ ಸೇರಿಸಲು ಕೇರಳ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿ ಕಬಿನಿ ನದಿಯ ಮತ್ತೊಂದು ದಡದಲ್ಲಿದ್ದ ನಾಗರಹೊಳೆ ಅರಣ್ಯದ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ ತಂದುಬಿಟ್ಟಿದ್ದರು.

ಇಲ್ಲಿನ ಅರಣ್ಯ ಅಧಿಕಾರಿಗಳಾದ ಮಧು ಮತ್ತು ಹನುಮಂತರಾಜು ಹಾಗೂ ಸಿಬ್ಬಂದಿ ಆನೆಮರಿಯನ್ನು ತಾಯಿ ಆನೆ ಪತ್ತೆ ಹಚ್ಚಿ ಅದರ ಜತೆ ಸೇರಿಸಲು ಕೇರಳದ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಿದ್ದರು. ಆದರೆ, ತಾಯಿ ಆನೆಯ ಸುಳಿವು ಸಿಗಲಿಲ್ಲವಾದ್ದರಿಂದ ಮರಿಯನ್ನು ಬಳ್ಳೆ ಶಿಬಿರದಲ್ಲಿ ಒಂದು ತಿಂಗಳಿನಿಂದ ಆರೈಕೆ ಮಾಡುತ್ತಿದ್ದರು. ಆದರೆ, ಅಸ್ವಸ್ಥಗೊಂಡಿದ್ದ ಆನೆ ಮರಿ ಅತಿಸಾರ ಭೇದಿಯಿಂದ ನಿತ್ರಾಣಗೊಂಡು ಚೇತರಿಕೆ ಕಾಣದೆ ಮೃತಪಟ್ಟಿದೆ.

ಪಶುವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿದರು. ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಡಿ. ಮಧು, ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿ ಹನುಮಂತರಾಜು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

11 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

12 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

12 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

13 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

13 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

13 hours ago