ಎಚ್.ಡಿ.ಕೋಟೆ : ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಆದಿವಾಸಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ಬಂಡೀಪುರ ಅಭಯಾರಣ್ಯದ ಎನ್.ಬೇಗೂರು ಅರಣ್ಯ ವಲಯ ವ್ಯಾಪ್ತಿಯ ಮಾಳದ ಹಾಡಿಯ ಕೆಂಚ (೬೭) ಹುಲಿ ದಾಳಿಯಿಂದ ಸಾವಿಗೀಡಾಗಿರುವ ವ್ಯಕ್ತಿ.
ಕಾಡಿನ ಸಮೀಪದಲ್ಲಿರುವ ಮಾಳದ ಹಾಡಿಯ ಜಮೀನಿನಲ್ಲಿ ಶನಿವಾರ ಕೆಂಚ ಕೆಲಸ ಮಾಡಿಕೊಂಡು ದನ ಮೇಯಿಸುತ್ತಿದ್ದಾಗ ಸಂಜೆ ವೇಳೆ ಹುಲಿ ದಾಳಿ ನಡೆಸಿ ಕಾಡಿಗೆ ಎಳೆದುಕೊಂಡು ಹೋಗಿ ತಿಂದಿದೆ.
ಶನಿವಾರ ರಾತ್ರಿ ತನ್ನ ಪತಿ ಮನೆಗೆ ಬಾರದೇ ಇದ್ದಾಗ ಪತ್ನಿ ಮಾರೆ ಎಲ್ಲಾ ಕಡೆ ಹುಡುಕಿದ್ದಾರೆ. ಆದರೆ ಸುಳಿವೇ ಸಿಗಲಿಲ್ಲ. ನಂತರ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದ್ದು, ಕಾಡಿನೊಳಗೆ ಪರಿಶೀಲಿಸಿದಾಗ ಹುಲಿ ದಾಳಿಯಿಂದ ಸಾವನ್ನಪ್ಪಿರುವ ಕೆಂಚನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಎಸಿಎಫ್ ಸತೀಶ್, ಅರಣ್ಯ ಅಧಿಕಾರಿ ಅಮೃತೇಶ್, ಗಿರಿಜನ ಮುಖಂಡರುಗಳಾದ ಶೈಲೇಂದ್ರ, ಪುಟ್ಟಬಸವ, ಸಿದ್ದರಾಜು, ದಾಸಪ್ಪ, ಇತರರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಹುಲಿ ದಾಳಿಯಿಂದ ಕೆಂಚ ಮೃತಪಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದನ್ನೆಲ್ಲ ಪರಿಶೀಲಿಸಿ ಅವರ ಕುಟುಂಬಕ್ಕೆ ೧೫ ಲಕ್ಷ ರೂ. ಪರಿಹಾರದ ಹಣವನ್ನು ಶಾಸಕರಾದ ಅನಿಲ್ ಚಿಕ್ಕಮಾದು ಅವರ ಸಮ್ಮುಖದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…