ಎಚ್.ಡಿ.ಕೋಟೆ : ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಆದಿವಾಸಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ಬಂಡೀಪುರ ಅಭಯಾರಣ್ಯದ ಎನ್.ಬೇಗೂರು ಅರಣ್ಯ ವಲಯ ವ್ಯಾಪ್ತಿಯ ಮಾಳದ ಹಾಡಿಯ ಕೆಂಚ (೬೭) ಹುಲಿ ದಾಳಿಯಿಂದ ಸಾವಿಗೀಡಾಗಿರುವ ವ್ಯಕ್ತಿ.
ಕಾಡಿನ ಸಮೀಪದಲ್ಲಿರುವ ಮಾಳದ ಹಾಡಿಯ ಜಮೀನಿನಲ್ಲಿ ಶನಿವಾರ ಕೆಂಚ ಕೆಲಸ ಮಾಡಿಕೊಂಡು ದನ ಮೇಯಿಸುತ್ತಿದ್ದಾಗ ಸಂಜೆ ವೇಳೆ ಹುಲಿ ದಾಳಿ ನಡೆಸಿ ಕಾಡಿಗೆ ಎಳೆದುಕೊಂಡು ಹೋಗಿ ತಿಂದಿದೆ.
ಶನಿವಾರ ರಾತ್ರಿ ತನ್ನ ಪತಿ ಮನೆಗೆ ಬಾರದೇ ಇದ್ದಾಗ ಪತ್ನಿ ಮಾರೆ ಎಲ್ಲಾ ಕಡೆ ಹುಡುಕಿದ್ದಾರೆ. ಆದರೆ ಸುಳಿವೇ ಸಿಗಲಿಲ್ಲ. ನಂತರ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದ್ದು, ಕಾಡಿನೊಳಗೆ ಪರಿಶೀಲಿಸಿದಾಗ ಹುಲಿ ದಾಳಿಯಿಂದ ಸಾವನ್ನಪ್ಪಿರುವ ಕೆಂಚನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಎಸಿಎಫ್ ಸತೀಶ್, ಅರಣ್ಯ ಅಧಿಕಾರಿ ಅಮೃತೇಶ್, ಗಿರಿಜನ ಮುಖಂಡರುಗಳಾದ ಶೈಲೇಂದ್ರ, ಪುಟ್ಟಬಸವ, ಸಿದ್ದರಾಜು, ದಾಸಪ್ಪ, ಇತರರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಹುಲಿ ದಾಳಿಯಿಂದ ಕೆಂಚ ಮೃತಪಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದನ್ನೆಲ್ಲ ಪರಿಶೀಲಿಸಿ ಅವರ ಕುಟುಂಬಕ್ಕೆ ೧೫ ಲಕ್ಷ ರೂ. ಪರಿಹಾರದ ಹಣವನ್ನು ಶಾಸಕರಾದ ಅನಿಲ್ ಚಿಕ್ಕಮಾದು ಅವರ ಸಮ್ಮುಖದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…