elephant attack
ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು ನಾಶ ಮಾಡುತ್ತಿದ್ದುದನ್ನು ನೋಡಿದ ರೈತ ಪುಟ್ಟರಾಜು ಲೈಟ್ ಹಾಕಿದಾಗ ಆಕ್ರೋಶಗೊಂಡು ಸಮೀಪದ ಮನೆಯ ಕಡೆ ಬಂದು ಮನೆಯನ್ನು ನಾಶ ಮಾಡಿದೆ.
ಇದರಿಂದ ಕುಟುಂಬಸ್ಥರು ಜೀವಭಯದಲ್ಲಿ ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು. ಕಾಡು ಪ್ರಾಣಿಗಳ ಹಾವಳಿಯಿಂದ ಈ ಭಾಗದ ರೈತರು ಮತ್ತು ಜನಸಾಮಾನ್ಯರ ಪರಿಸ್ಥಿತಿ ಅತಂತ್ರವಾಗಿದೆ.
ಅಧಿಕಾರಿಗಳು ಸೂಕ್ತ ಪರಿಹಾರ ನೀಡಿ ಕಾಡುಪ್ರಾಣಿಗಳು ಜಮೀನುಗಳು ಮತ್ತು ಮನೆಗಳ ಬಳಿ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ರೈತರಾದ ಪುಟ್ಟರಾಜು, ರವಿ ಆಗ್ರಹಿಸಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…