elephant attack
ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು ನಾಶ ಮಾಡುತ್ತಿದ್ದುದನ್ನು ನೋಡಿದ ರೈತ ಪುಟ್ಟರಾಜು ಲೈಟ್ ಹಾಕಿದಾಗ ಆಕ್ರೋಶಗೊಂಡು ಸಮೀಪದ ಮನೆಯ ಕಡೆ ಬಂದು ಮನೆಯನ್ನು ನಾಶ ಮಾಡಿದೆ.
ಇದರಿಂದ ಕುಟುಂಬಸ್ಥರು ಜೀವಭಯದಲ್ಲಿ ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು. ಕಾಡು ಪ್ರಾಣಿಗಳ ಹಾವಳಿಯಿಂದ ಈ ಭಾಗದ ರೈತರು ಮತ್ತು ಜನಸಾಮಾನ್ಯರ ಪರಿಸ್ಥಿತಿ ಅತಂತ್ರವಾಗಿದೆ.
ಅಧಿಕಾರಿಗಳು ಸೂಕ್ತ ಪರಿಹಾರ ನೀಡಿ ಕಾಡುಪ್ರಾಣಿಗಳು ಜಮೀನುಗಳು ಮತ್ತು ಮನೆಗಳ ಬಳಿ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ರೈತರಾದ ಪುಟ್ಟರಾಜು, ರವಿ ಆಗ್ರಹಿಸಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…