ಮೈಸೂರು

ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದ ಯದುವೀರ್ ಅವರಿಗೆ ತಿಳಿದಿಲ್ಲವೇ..? ; ಎಂ.ಲಕ್ಷ್ಮಣ್ ಪ್ರಶ್ನೆ

ಮೈಸೂರು : ಮೈಸೂರು-ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಡಿಕೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ.ಆದರೆ ಮಳೆ ಹಾನಿ ಪ್ರದೇಶಕ್ಕೆ ಮೈಸೂರು ಕೊಡಗು ಸಂಸದ ಯದುವೀರ್‌ ಒಡೆಯರ್‌ ಭೇಟಿ ನೀಡಿ ಜನರ ಸಮಸ್ಯೆಗಳಲ್ಲಿ ಆಲಿಸಿಲ್ಲ. ಯಾಕೇ ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದರಿಗೆ ತಿಳಿದಿಲ್ವಾ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ʻಈ ಬಾರಿ ನಿರಂತರವಾದ ಮಳೆಯಿಂದ ಜನರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಅವಾಂತರ ಸೃಷ್ಠಿಸಿದೆ. ಆದರೆ ಸಂಸದರು ಇನ್ನು ಭೇಟಿ ನೀಡಿಲ್ಲ. ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಯದುವೀರ್‌ ಒಡೆಯರ್‌ ಅವರಿಗೆ ೬೫ ಸಾವಿರ ಮತಗಳು ಬಂದಿದೆ. ಹೀಗಾಗಿ ಆ ಭಾಗದಲ್ಲೂ ಕೂಡ ಅವರು ಅಭಿವೃದ್ಧಿಗೆ ಗಮನಕೊಡಬೇಕು. ನಮ್ಮ ಸರ್ಕಾರ ನರ್ಮ್‌ ಯೋಜನೆಯಡಿ ೨ ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದೇವೆ. ನೀವು ಅಭಿವೃದ್ಧಿಯತ್ತ ಗಮನ ಕೊಡಬೇಕುʼ ಎಂದು ಹೇಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

40 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago