ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಶ್ಮಣ್, ಸೆಪ್ಟೆಂಬರ್ 6ರಂದು ಪ್ರತಾಪ್ ಸಿಂಹ ಕಚೇರಿ ಮುಂಭಾಗ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಅದರಂತೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ದಾಖಲೆಗಳ ಸಮೇತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗಮಿಸಿದ್ದರು. ಆದರೆ, ಲಕ್ಷ್ಮಣ್ ಅವರನ್ನು ಪೊಲೀಸರು ಒಳಗೆ ಬಿಡಲಿಲ್ಲ.
ಆದ್ದರಿಂದ ಜಲದರ್ಶಿನಿ ಗೇಟ್ ಮುಂಭಾಗವೇ ಲಕ್ಷ್ಮಣ್ ನಿಂತಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಣ್ಗೆ ಸಾಥ್ ನೀಡಿದರು. ಕಾಂಗ್ರೆಸ್ ನಾಯಕರು ಆಗಮಿಸುವ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಬಳಿಕ ಮಾತನಾಡಿದ ಲಕ್ಷ್ಮಣ್, ʼʼಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ಅವರದ್ದೇ ಬಿಜೆಪಿ ಸರ್ಕಾರ ಇತ್ತು. ಅವರ ವಿಶ್ವಗುರು ಪ್ರಧಾನಿ ಆಗಿದ್ದರು. ಸಂಸದರಾಗಿ ಪ್ರತಾಪ್ ಸಿಂಹ ನೀವೇನು ಕೊಟ್ಟಿದ್ದೀರಿ? ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಹೇಳಿಕೊಳ್ಳುತ್ತಾರೆʼʼ ಎಂದು ಕಿಡಿಕಾರಿದರು.
ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…
ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…
ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…
ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…
ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…
ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…