ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಶ್ಮಣ್, ಸೆಪ್ಟೆಂಬರ್ 6ರಂದು ಪ್ರತಾಪ್ ಸಿಂಹ ಕಚೇರಿ ಮುಂಭಾಗ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಅದರಂತೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ದಾಖಲೆಗಳ ಸಮೇತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗಮಿಸಿದ್ದರು. ಆದರೆ, ಲಕ್ಷ್ಮಣ್ ಅವರನ್ನು ಪೊಲೀಸರು ಒಳಗೆ ಬಿಡಲಿಲ್ಲ.
ಆದ್ದರಿಂದ ಜಲದರ್ಶಿನಿ ಗೇಟ್ ಮುಂಭಾಗವೇ ಲಕ್ಷ್ಮಣ್ ನಿಂತಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಣ್ಗೆ ಸಾಥ್ ನೀಡಿದರು. ಕಾಂಗ್ರೆಸ್ ನಾಯಕರು ಆಗಮಿಸುವ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಬಳಿಕ ಮಾತನಾಡಿದ ಲಕ್ಷ್ಮಣ್, ʼʼಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ಅವರದ್ದೇ ಬಿಜೆಪಿ ಸರ್ಕಾರ ಇತ್ತು. ಅವರ ವಿಶ್ವಗುರು ಪ್ರಧಾನಿ ಆಗಿದ್ದರು. ಸಂಸದರಾಗಿ ಪ್ರತಾಪ್ ಸಿಂಹ ನೀವೇನು ಕೊಟ್ಟಿದ್ದೀರಿ? ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಹೇಳಿಕೊಳ್ಳುತ್ತಾರೆʼʼ ಎಂದು ಕಿಡಿಕಾರಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…