ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಶ್ಮಣ್, ಸೆಪ್ಟೆಂಬರ್ 6ರಂದು ಪ್ರತಾಪ್ ಸಿಂಹ ಕಚೇರಿ ಮುಂಭಾಗ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಅದರಂತೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ದಾಖಲೆಗಳ ಸಮೇತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗಮಿಸಿದ್ದರು. ಆದರೆ, ಲಕ್ಷ್ಮಣ್ ಅವರನ್ನು ಪೊಲೀಸರು ಒಳಗೆ ಬಿಡಲಿಲ್ಲ.
ಆದ್ದರಿಂದ ಜಲದರ್ಶಿನಿ ಗೇಟ್ ಮುಂಭಾಗವೇ ಲಕ್ಷ್ಮಣ್ ನಿಂತಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಣ್ಗೆ ಸಾಥ್ ನೀಡಿದರು. ಕಾಂಗ್ರೆಸ್ ನಾಯಕರು ಆಗಮಿಸುವ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಬಳಿಕ ಮಾತನಾಡಿದ ಲಕ್ಷ್ಮಣ್, ʼʼಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ಅವರದ್ದೇ ಬಿಜೆಪಿ ಸರ್ಕಾರ ಇತ್ತು. ಅವರ ವಿಶ್ವಗುರು ಪ್ರಧಾನಿ ಆಗಿದ್ದರು. ಸಂಸದರಾಗಿ ಪ್ರತಾಪ್ ಸಿಂಹ ನೀವೇನು ಕೊಟ್ಟಿದ್ದೀರಿ? ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಹೇಳಿಕೊಳ್ಳುತ್ತಾರೆʼʼ ಎಂದು ಕಿಡಿಕಾರಿದರು.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…