ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಶ್ಮಣ್, ಸೆಪ್ಟೆಂಬರ್ 6ರಂದು ಪ್ರತಾಪ್ ಸಿಂಹ ಕಚೇರಿ ಮುಂಭಾಗ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಅದರಂತೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ದಾಖಲೆಗಳ ಸಮೇತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗಮಿಸಿದ್ದರು. ಆದರೆ, ಲಕ್ಷ್ಮಣ್ ಅವರನ್ನು ಪೊಲೀಸರು ಒಳಗೆ ಬಿಡಲಿಲ್ಲ.
ಆದ್ದರಿಂದ ಜಲದರ್ಶಿನಿ ಗೇಟ್ ಮುಂಭಾಗವೇ ಲಕ್ಷ್ಮಣ್ ನಿಂತಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಣ್ಗೆ ಸಾಥ್ ನೀಡಿದರು. ಕಾಂಗ್ರೆಸ್ ನಾಯಕರು ಆಗಮಿಸುವ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಬಳಿಕ ಮಾತನಾಡಿದ ಲಕ್ಷ್ಮಣ್, ʼʼಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ಅವರದ್ದೇ ಬಿಜೆಪಿ ಸರ್ಕಾರ ಇತ್ತು. ಅವರ ವಿಶ್ವಗುರು ಪ್ರಧಾನಿ ಆಗಿದ್ದರು. ಸಂಸದರಾಗಿ ಪ್ರತಾಪ್ ಸಿಂಹ ನೀವೇನು ಕೊಟ್ಟಿದ್ದೀರಿ? ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಹೇಳಿಕೊಳ್ಳುತ್ತಾರೆʼʼ ಎಂದು ಕಿಡಿಕಾರಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…