ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಶ್ಮಣ್, ಸೆಪ್ಟೆಂಬರ್ 6ರಂದು ಪ್ರತಾಪ್ ಸಿಂಹ ಕಚೇರಿ ಮುಂಭಾಗ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಅದರಂತೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ದಾಖಲೆಗಳ ಸಮೇತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗಮಿಸಿದ್ದರು. ಆದರೆ, ಲಕ್ಷ್ಮಣ್ ಅವರನ್ನು ಪೊಲೀಸರು ಒಳಗೆ ಬಿಡಲಿಲ್ಲ.
ಆದ್ದರಿಂದ ಜಲದರ್ಶಿನಿ ಗೇಟ್ ಮುಂಭಾಗವೇ ಲಕ್ಷ್ಮಣ್ ನಿಂತಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಣ್ಗೆ ಸಾಥ್ ನೀಡಿದರು. ಕಾಂಗ್ರೆಸ್ ನಾಯಕರು ಆಗಮಿಸುವ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಬಳಿಕ ಮಾತನಾಡಿದ ಲಕ್ಷ್ಮಣ್, ʼʼಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ಅವರದ್ದೇ ಬಿಜೆಪಿ ಸರ್ಕಾರ ಇತ್ತು. ಅವರ ವಿಶ್ವಗುರು ಪ್ರಧಾನಿ ಆಗಿದ್ದರು. ಸಂಸದರಾಗಿ ಪ್ರತಾಪ್ ಸಿಂಹ ನೀವೇನು ಕೊಟ್ಟಿದ್ದೀರಿ? ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಹೇಳಿಕೊಳ್ಳುತ್ತಾರೆʼʼ ಎಂದು ಕಿಡಿಕಾರಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…