ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶೇ.33 ರಷ್ಟು ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುವುದಕ್ಕೆ ಕಾಂಗ್ರೆಸ್ನ ಯಾವುದೇ ತಕರಾರಿಲ್ಲ. 1998ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರಿಚಯಿಸಿ, 2010ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಲಾಗಿತ್ತು. ಆದರೆ, ಈಗ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಜೊತೆಗೆ ಡಿಲಿಮಿಟೇಶನ್ ಕಾಯ್ದೆ ಜಾರಿಗೊಳಿಸುತ್ತಿರುವುದರಲ್ಲಿ ಬಿಜೆಪಿಯ ಕುತಂತ್ರ ಅಡಗಿದೆ ಎಂದರು.
ಲೋಕಸಭೆಯ 543 ಸ್ಥಾನಗಳಲ್ಲಿ ಶೇ.50 ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಉದ್ದೇಶವುಳ್ಳ ಡಿಲಿಮಿಟೇಶನ್ ಕಾಯ್ದೆ ಜಾರಿಯಿಂದ ದಕ್ಷಿಣ ಭಾರತ ಆರು ರಾಜ್ಯಗಳಿಗೆ ಅನ್ಯಾಯವಾಗಲಿದೆ. ಕರ್ನಾಟಕದ 28 ಲೋಕಸಭಾ ಸ್ಥಾನಗಳ ಶೇ.50 ರಷ್ಟು ಅಂದರೆ 14 ಸ್ಥಾನಗಳು ಹೆಚ್ಚಾಗಿ ಒಟ್ಟು 42 ಲೋಕಸಭಾ ಸ್ಥಾನಗಳಾಗಬೇಕು. ಆದರೆ, ಕಾಯ್ದೆಯಲ್ಲಿ 41 ಸ್ಥಾನಗಳೆಂದು ತೋರಿಸಲಾಗಿದೆ. ಹಾಗೆಯೇ ಕೇರಳ ರಾಜ್ಯದಲ್ಲಿ 21 ಲೋಕಸಭಾ ಸ್ಥಾನಗಳಿದ್ದು, ಶೇ.50 ರಷ್ಟು ಹೆಚ್ಚಳವಾದರೆ ಒಟ್ಟು 40 ಸ್ಥಾನಗಳಾಗಬೇಕು. ಆದರೆ, ಕಾಯ್ದೆಯಲ್ಲಿ ಕೇವಲ 2 ಸ್ಥಾನಗಳನ್ನು ಹೆಚ್ಚಿಸಿ 22 ಲೋಕಸಭಾ ಸ್ಥಾನಗಳೆಂದು ವಿಂಗಡಿಸಲಾಗಿದೆ. ತಮಿಳುನಾಡಲ್ಲೂ 39 ರಿಂದ 60 ಸ್ಥಾನವಾಗಬೇಕು. ಆದರೆ 48 ಸ್ಥಾನಗಳನ್ನು ತೋರಿಸಲಾಗಿದೆ. ಅದೇ ರೀತಿ ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳು ಡಿಲಿಮಿಟೇಶನ್ ಕಾಯ್ದೆಯಿಂದ 120 ಸ್ಥಾನಗಳಾಗಬೇಕು. ಆದರೆ 142 ಸ್ಥಾನಗಳೆಂದು ಕಾಯ್ದೆಯಲ್ಲಿ ತೋರಿಸಲಾಗಿದ್ದು, ಯಾರಿಗೂ ಅರ್ಥವಾಗದ ಮಾನದಂಡದಲ್ಲಿ ಪುನರ್ವಿಂಗಡಣೆ ಮಾಡಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆಯಾದರೂ ಒಟ್ಟು 580 ಲೋಕಸಭಾ ಸ್ಥಾನಗಳಾಗಬೇಕು. ಆದರೆ ಕಾಯ್ದೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಿ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಕಡಿಮೆ ಮಾಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ. ದೇಶದ ಆದಾಯದಲ್ಲಿ ಶೇ.40 ರಷ್ಟು ಪಾಲು ದಕ್ಷಿಣ ಭಾರತದ ರಾಜ್ಯಗಳಾಗಿದೆ. ಅಲ್ಲದೆ ಜನಸಂಖ್ಯೆ ನಿಯಂತ್ರಣ ಪಾಲನೆಯಲ್ಲೂ ದಕ್ಷಿಣ ಭಾರತದ ರಾಜ್ಯಗಳು ಮುಂದಿವೆ. 2 ಲಕ್ಷ ಕೋಟಿ ರೂ.ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ದಕ್ಷಿಣ ಭಾರತದಿಂದ 7.5 ಲಕ್ಷ ಕೋಟಿ ರೂ.ಸಂಗ್ರಹವಾಗುತ್ತಿದೆ. ಒಟ್ಟಾರೆ ತೆರಿಗೆಯಲ್ಲಿ ರಾಜ್ಯದಿಂದಲೇ 5 ಲಕ್ಷ ಕೋಟಿ ರೂ.ಗಳನ್ನು ಕೇಂದ್ರಕ್ಕೆ ಕೊಡಲಾಗುತ್ತಿದೆ. ಇಷ್ಟೆಲ್ಲಾ ಇದ್ದರೂ ಜನರ ದಿಕ್ಕು ತಪ್ಪಿಸಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ನಾಲ್ಕೈದು ರಾಜ್ಯಗಳಲ್ಲಿ ಗೆದ್ದು, ಇಡೀ ರಾಷ್ಟ್ರದ ಅಧಿಕಾರ ಹಿಡಿಯುವ ಹುನ್ನಾರವೇ ಡಿಲಿಮಿಟೇಶನ್ ಕಾಯ್ದೆಯಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…