ಮೈಸೂರು

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶೇ.33 ರಷ್ಟು ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುವುದಕ್ಕೆ ಕಾಂಗ್ರೆಸ್‌ನ ಯಾವುದೇ ತಕರಾರಿಲ್ಲ. 1998ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರಿಚಯಿಸಿ, 2010ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಲಾಗಿತ್ತು. ಆದರೆ, ಈಗ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಜೊತೆಗೆ ಡಿಲಿಮಿಟೇಶನ್ ಕಾಯ್ದೆ ಜಾರಿಗೊಳಿಸುತ್ತಿರುವುದರಲ್ಲಿ ಬಿಜೆಪಿಯ ಕುತಂತ್ರ ಅಡಗಿದೆ ಎಂದರು.

ಲೋಕಸಭೆಯ 543 ಸ್ಥಾನಗಳಲ್ಲಿ ಶೇ.50 ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಉದ್ದೇಶವುಳ್ಳ ಡಿಲಿಮಿಟೇಶನ್ ಕಾಯ್ದೆ ಜಾರಿಯಿಂದ ದಕ್ಷಿಣ ಭಾರತ ಆರು ರಾಜ್ಯಗಳಿಗೆ ಅನ್ಯಾಯವಾಗಲಿದೆ. ಕರ್ನಾಟಕದ 28 ಲೋಕಸಭಾ ಸ್ಥಾನಗಳ ಶೇ.50 ರಷ್ಟು ಅಂದರೆ 14 ಸ್ಥಾನಗಳು ಹೆಚ್ಚಾಗಿ ಒಟ್ಟು 42 ಲೋಕಸಭಾ ಸ್ಥಾನಗಳಾಗಬೇಕು. ಆದರೆ, ಕಾಯ್ದೆಯಲ್ಲಿ 41 ಸ್ಥಾನಗಳೆಂದು ತೋರಿಸಲಾಗಿದೆ. ಹಾಗೆಯೇ ಕೇರಳ ರಾಜ್ಯದಲ್ಲಿ 21 ಲೋಕಸಭಾ ಸ್ಥಾನಗಳಿದ್ದು, ಶೇ.50 ರಷ್ಟು ಹೆಚ್ಚಳವಾದರೆ ಒಟ್ಟು 40 ಸ್ಥಾನಗಳಾಗಬೇಕು. ಆದರೆ, ಕಾಯ್ದೆಯಲ್ಲಿ ಕೇವಲ 2 ಸ್ಥಾನಗಳನ್ನು ಹೆಚ್ಚಿಸಿ 22 ಲೋಕಸಭಾ ಸ್ಥಾನಗಳೆಂದು ವಿಂಗಡಿಸಲಾಗಿದೆ. ತಮಿಳುನಾಡಲ್ಲೂ 39 ರಿಂದ 60 ಸ್ಥಾನವಾಗಬೇಕು. ಆದರೆ 48 ಸ್ಥಾನಗಳನ್ನು ತೋರಿಸಲಾಗಿದೆ. ಅದೇ ರೀತಿ ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳು ಡಿಲಿಮಿಟೇಶನ್ ಕಾಯ್ದೆಯಿಂದ 120 ಸ್ಥಾನಗಳಾಗಬೇಕು. ಆದರೆ 142 ಸ್ಥಾನಗಳೆಂದು ಕಾಯ್ದೆಯಲ್ಲಿ ತೋರಿಸಲಾಗಿದ್ದು, ಯಾರಿಗೂ ಅರ್ಥವಾಗದ ಮಾನದಂಡದಲ್ಲಿ ಪುನರ್ವಿಂಗಡಣೆ ಮಾಡಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆಯಾದರೂ ಒಟ್ಟು 580 ಲೋಕಸಭಾ ಸ್ಥಾನಗಳಾಗಬೇಕು. ಆದರೆ ಕಾಯ್ದೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಿ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಕಡಿಮೆ ಮಾಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ. ದೇಶದ ಆದಾಯದಲ್ಲಿ ಶೇ.40 ರಷ್ಟು ಪಾಲು ದಕ್ಷಿಣ ಭಾರತದ ರಾಜ್ಯಗಳಾಗಿದೆ. ಅಲ್ಲದೆ ಜನಸಂಖ್ಯೆ ನಿಯಂತ್ರಣ ಪಾಲನೆಯಲ್ಲೂ ದಕ್ಷಿಣ ಭಾರತದ ರಾಜ್ಯಗಳು ಮುಂದಿವೆ. 2 ಲಕ್ಷ ಕೋಟಿ ರೂ.ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ದಕ್ಷಿಣ ಭಾರತದಿಂದ 7.5 ಲಕ್ಷ ಕೋಟಿ ರೂ.ಸಂಗ್ರಹವಾಗುತ್ತಿದೆ. ಒಟ್ಟಾರೆ ತೆರಿಗೆಯಲ್ಲಿ ರಾಜ್ಯದಿಂದಲೇ 5 ಲಕ್ಷ ಕೋಟಿ ರೂ.ಗಳನ್ನು ಕೇಂದ್ರಕ್ಕೆ ಕೊಡಲಾಗುತ್ತಿದೆ. ಇಷ್ಟೆಲ್ಲಾ ಇದ್ದರೂ ಜನರ ದಿಕ್ಕು ತಪ್ಪಿಸಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ನಾಲ್ಕೈದು ರಾಜ್ಯಗಳಲ್ಲಿ ಗೆದ್ದು, ಇಡೀ ರಾಷ್ಟ್ರದ ಅಧಿಕಾರ ಹಿಡಿಯುವ ಹುನ್ನಾರವೇ ಡಿಲಿಮಿಟೇಶನ್ ಕಾಯ್ದೆಯಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago