ಮೈಸೂರು : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲಿಗರು ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಿದೆ.
ಅಕ್ಟೋಬರ್ 26 ಮತ್ತು27 ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಅವರ ಆಧಾರ ರಹಿತ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದರಿಂದ,ಕುಮಾರಸ್ವಾಮಿ ರವರ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಕೆಪಿಸಿಸಿ ವಕ್ತಾರನಾದ ನನಗೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಹಾಗೂ ನಮ್ಮ ಮನೆಗೆ ಮುತ್ತಿಗೆ ಹಾಕಲು ಮತ್ತು ಒಂಟಿಯಾಗಿದ್ದಾಗ ನನ್ನನ್ನು ಅಟ್ಯಾಕ್ ಮಾಡಲು ಅಕ್ಟೋಬರ್ 28 ರ ಶನಿವಾರ ಬೆಳಿಗ್ಗೆ ಕೆಲವರು ಕಲಾಮಂದಿರದ ಮುಂದೆ ಮಾತನಾಡಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮ ಜರುಗಿಸಬೇಕುʼ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ದೂರು ನೀಡಿದ್ದಾರೆ.
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…