ಮೈಸೂರು

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಕುಮಾರಸ್ವಾಮಿ ಬೆಂಬಲಿಗರಿಂದ ಜೀವ ಬೆದರಿಕೆ : ನಗರ ಪೊಲೀಸ್ ಆಯುಕ್ತರಿಗೆ ದೂರು

ಮೈಸೂರು : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲಿಗರು ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಿದೆ.

ಅಕ್ಟೋಬರ್ 26 ಮತ್ತು27 ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಅವರ ಆಧಾರ ರಹಿತ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದರಿಂದ,ಕುಮಾರಸ್ವಾಮಿ ರವರ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಕೆಪಿಸಿಸಿ ವಕ್ತಾರನಾದ ನನಗೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಹಾಗೂ ನಮ್ಮ ಮನೆಗೆ ಮುತ್ತಿಗೆ ಹಾಕಲು ಮತ್ತು ಒಂಟಿಯಾಗಿದ್ದಾಗ ನನ್ನನ್ನು ಅಟ್ಯಾಕ್ ಮಾಡಲು ಅಕ್ಟೋಬರ್ 28 ರ ಶನಿವಾರ ಬೆಳಿಗ್ಗೆ ಕೆಲವರು ಕಲಾಮಂದಿರದ ಮುಂದೆ ಮಾತನಾಡಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮ ಜರುಗಿಸಬೇಕುʼ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ದೂರು ನೀಡಿದ್ದಾರೆ.

lokesh

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

35 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago