ಮೈಸೂರು

ಕೆ.ಆರ್‌ ನಗರ : ಭತ್ತ,ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

ಕೆ.ಆರ್‌.ನಗರ : ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಮತ್ತು ರಾಗಿ ಕೇಂದ್ರವನ್ನು ಶಾಸಕ ಡಿ.ರವಿಶಂಕರ್‌ ಉದ್ಘಾಟಿಸಿದರು.

ಪ್ರತಿ ಕ್ವಿಂಟಲ್‌ ಸಾಮಾನ್ಯ ಭತ್ತಕ್ಕೆ 2,300, ಗ್ರೇಡ್-ಎ 2,320ರೂ.ಗಳನ್ನುನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ ಕನಿಷ್ಠ 25 ರಿಂದ 50 ಕ್ವಿಂಟಲ್ ವರೆಗೆ ಖರೀದಿ ಮಾಡಲಾಗುತ್ತಿದೆ. ಇನ್ನೂ ಕ್ವಿಂಟಲ್ ರಾಗಿಗೆ 4,290 ನಂತೆ 10 ಕ್ವಿಂಟಲ್‌ನಿಂದ 20ರವರೆಗೆ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

ಸರ್ಕಾರ ರಾಗಿ ಮತ್ತು ಭತ್ತ ಸೇರಿದಂತೆ ಇತರ ಬೆಳೆ ಗಳಿಗೆ ಬೆಂಬಲ ಬೆಲೆ ಘೋಷಿಸಿ ಸರ್ಕಾರವೇ ರೈತ ರಿಂದ ನೇರವಾಗಿ ಖರೀದಿ ಮಾಡುತ್ತಿದ್ದು, ಎಲ್ಲ ರೈತ ಬಾಂಧವರು ಇದನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.

ಕೆ ಆರ್ ನಗರ, ಸಾಲಿಗ್ರಾಮ ಮತ್ತು ಚುಂಚನಕಟ್ಟೆಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ನೇರವಾಗಿ ಖರೀದಿ ಕೇಂದ್ರಕ್ಕೆ ಭತ್ತ ಮತ್ತು ರಾಗಿ ಸರಬರಾಜು ಮಾಡಿ ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಖರೀದಿ ಕೇಂದ್ರದಲ್ಲಿ ಪಡೆದ ರಾಗಿಯನ್ನು ನೇರವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರದಾರರಿಗೆ ವಿತರಿಸುವುದರಿಂದ ಗುಣಮಟ್ಟದ ರಾಗಿಯನ್ನು ಖರೀದಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ಈ ಬಾರಿ ಬೆಳೆದಂತಹ ರಾಗಿಯನ್ನು ಮಾತ್ರ ಪಡೆಯಬೇಕು ಹಣದ ಆಸೆ ಗಾಗಿ ಮಧ್ಯವರ್ತಿಗಳಿಗೆ ಆದ್ಯತೆ ನೀಡಿದ್ದು ಮತ್ತು ಹಳೆ ರಾಗಿ ಖರೀದಿ ಮಾಡಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ತಲೆದಂಡವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪುರಸಭೆ ಅಧ್ಯಕ್ಷ ಶಿವುನಾಯಕ್, ಸದಸ್ಯ ಕೋಳಿ ಪ್ರಕಾಶ್, ಸೈಯದ್ ಸಿದ್ದಿಕ್, ಮಾಜಿ ಪುರಸಭಾ ಅಧ್ಯಕ್ಷ ನರಸಿಂಹರಾಜು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡ ಮಹೇಶ್, ಪುರಸಭಾ ಮಾಜಿ ಸದಸ್ಯ ಕೆ. ವಿನಯ್, ಎಪಿಎಂಸಿ ಮಾಜಿ ನಿರ್ದೇಶಕರಾದ ಹಂಪಾಪುರ ಪ್ರಶಾಂತ್, ಹೆಬ್ಬಾಳು ನಾಗೇಂದ್ರ, ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹಾದೇವ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ಕಾಂಗ್ರೆಸ್ ವಕ್ತಾರ ಸೈಯದ್ ಜಬೀರ್, ರೈತ ಮುಖಂಡ ಕುಮಾರ್ ಹಾಗೂ ಮತ್ತಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

48 mins ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

4 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

5 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

6 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

6 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

7 hours ago