ಮೈಸೂರು

ಕೆ.ಆರ್‌ ನಗರ : ಭತ್ತ,ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

ಕೆ.ಆರ್‌.ನಗರ : ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಮತ್ತು ರಾಗಿ ಕೇಂದ್ರವನ್ನು ಶಾಸಕ ಡಿ.ರವಿಶಂಕರ್‌ ಉದ್ಘಾಟಿಸಿದರು.

ಪ್ರತಿ ಕ್ವಿಂಟಲ್‌ ಸಾಮಾನ್ಯ ಭತ್ತಕ್ಕೆ 2,300, ಗ್ರೇಡ್-ಎ 2,320ರೂ.ಗಳನ್ನುನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ ಕನಿಷ್ಠ 25 ರಿಂದ 50 ಕ್ವಿಂಟಲ್ ವರೆಗೆ ಖರೀದಿ ಮಾಡಲಾಗುತ್ತಿದೆ. ಇನ್ನೂ ಕ್ವಿಂಟಲ್ ರಾಗಿಗೆ 4,290 ನಂತೆ 10 ಕ್ವಿಂಟಲ್‌ನಿಂದ 20ರವರೆಗೆ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

ಸರ್ಕಾರ ರಾಗಿ ಮತ್ತು ಭತ್ತ ಸೇರಿದಂತೆ ಇತರ ಬೆಳೆ ಗಳಿಗೆ ಬೆಂಬಲ ಬೆಲೆ ಘೋಷಿಸಿ ಸರ್ಕಾರವೇ ರೈತ ರಿಂದ ನೇರವಾಗಿ ಖರೀದಿ ಮಾಡುತ್ತಿದ್ದು, ಎಲ್ಲ ರೈತ ಬಾಂಧವರು ಇದನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.

ಕೆ ಆರ್ ನಗರ, ಸಾಲಿಗ್ರಾಮ ಮತ್ತು ಚುಂಚನಕಟ್ಟೆಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ನೇರವಾಗಿ ಖರೀದಿ ಕೇಂದ್ರಕ್ಕೆ ಭತ್ತ ಮತ್ತು ರಾಗಿ ಸರಬರಾಜು ಮಾಡಿ ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಖರೀದಿ ಕೇಂದ್ರದಲ್ಲಿ ಪಡೆದ ರಾಗಿಯನ್ನು ನೇರವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರದಾರರಿಗೆ ವಿತರಿಸುವುದರಿಂದ ಗುಣಮಟ್ಟದ ರಾಗಿಯನ್ನು ಖರೀದಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ಈ ಬಾರಿ ಬೆಳೆದಂತಹ ರಾಗಿಯನ್ನು ಮಾತ್ರ ಪಡೆಯಬೇಕು ಹಣದ ಆಸೆ ಗಾಗಿ ಮಧ್ಯವರ್ತಿಗಳಿಗೆ ಆದ್ಯತೆ ನೀಡಿದ್ದು ಮತ್ತು ಹಳೆ ರಾಗಿ ಖರೀದಿ ಮಾಡಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ತಲೆದಂಡವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪುರಸಭೆ ಅಧ್ಯಕ್ಷ ಶಿವುನಾಯಕ್, ಸದಸ್ಯ ಕೋಳಿ ಪ್ರಕಾಶ್, ಸೈಯದ್ ಸಿದ್ದಿಕ್, ಮಾಜಿ ಪುರಸಭಾ ಅಧ್ಯಕ್ಷ ನರಸಿಂಹರಾಜು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡ ಮಹೇಶ್, ಪುರಸಭಾ ಮಾಜಿ ಸದಸ್ಯ ಕೆ. ವಿನಯ್, ಎಪಿಎಂಸಿ ಮಾಜಿ ನಿರ್ದೇಶಕರಾದ ಹಂಪಾಪುರ ಪ್ರಶಾಂತ್, ಹೆಬ್ಬಾಳು ನಾಗೇಂದ್ರ, ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹಾದೇವ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ಕಾಂಗ್ರೆಸ್ ವಕ್ತಾರ ಸೈಯದ್ ಜಬೀರ್, ರೈತ ಮುಖಂಡ ಕುಮಾರ್ ಹಾಗೂ ಮತ್ತಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

1 hour ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago