ಕೆ.ಆರ್.ಪೇಟೆ : ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.leopard
ತಾಲ್ಲೂಕಿನ ಕಸಬಾ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದ ರೈತ ಪುಟ್ಟರಾಜು ಅವರಿಗೆ ಸೇರಿದ ಹಸುವಿನ ಕರುವನ್ನು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು. ಮಂಗಳವಾರ ತಡರಾತ್ರಿ ಚಿರತೆ ದಾಳಿ ಮಾಡಿ ಸುಮಾರು ೪೦ ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಕರುವನ್ನು ತಿಂದು ಹಾಕಿದೆ.
ಪುಟ್ಟರಾಜು ಮನೆಯ ಬೀದಿಯಲ್ಲಿ ರಾತ್ರಿ ವೇಳೆ ಸಂಚರಿಸಲು ಬೀದಿ ದೀಪದ ಕೊರತೆಯಿದ್ದು, ಕತ್ತಲು ಆವರಿಸಿದ ಕಾರಣ ಚಿರತೆ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಆ ಬೀದಿಗೆ ಬೀದಿದೀಪಗಳನ್ನು ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಚಿರತೆ ದಾಳಿಯಿಂದ ಭಯಭೀತರಾಗಿರುವ ಜನತೆ ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…