ಮೈಸೂರು

ಕೃಷ್ಣರಾಜ: BJP ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಕೆ, ರಾಮದಾಸ್ ಸಾಥ್

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿ.ಎಸ್. ಶ್ರೀವತ್ಸ ಗುರುವಾರ ನಾಮಪತ್ರ ಸಲ್ಲಿಸಿದರು.
ಪಾಲಿಕೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಮುಖಂಡ ತೋಂಟದಾರ್ಯ, ಶಾಸಕ ರಾಮದಾಸ್, ಸಂಸದ ಪ್ರತಾಪ ಸಿಂಹ ಮತ್ತು ಮೇಯರ್‌ ಶಿವಕುಮಾರ್ ಸಾಥ್ ನೀಡಿದರು.

ಇದಕ್ಕೂ ಮುನ್ನ ಮೆರವಣಿಗೆ ಹಾಗೂ ಶಕ್ತಿಪ್ರದರ್ಶನ ನಡೆಯಿತು. ಅಗ್ರಹಾರದ 101 ಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರರು ಮಂದಿ ಪಾಲ್ಗೊಂಡಿದ್ದರು.

ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ತೆರೆದ ವಾಹನದಲ್ಲಿ ಟಿ.ಎಸ್. ಶ್ರೀವತ್ಸ, ಹಾಲಿ ಶಾಸಕ ಹಾಗೂ ಈ ಬಾರಿ ಟಿಕೆಟ್‌ ತಪ್ಪಿಸಿಕೊಂಡ ಎಸ್.ಎ.ರಾಮದಾಸ್, ಮೇಯರ್ ಶಿವಕುಮಾರ್, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್ ಮೊದಲಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಸ್ಥಾನಕ್ಕೆ ಬಂದ ರಾಮದಾಸ್ ಅವರನ್ನು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಗಲ ಮೇಲೆ ಕೂರಿಸಿಕೊಂಡು ಬಂದು ತೆರೆದ ವಾಹನದವರೆಗೆ ಕರೆತಂದರು. ಶಾಸಕ ಎಲ್.ನಾಗೇಂದ್ರ ಮೊದಲಾದವರು ಪಾಲ್ಗೊಂಡಿದ್ದರು. ಮೆರವಣಿಗೆಗೆ ಮೆರುಗು ನೀಡಿದ ವೀರಗಾಸೆ, ನಗಾರಿ, ಡೊಳ್ಳು ಮೊದಲಾದ ಕಲಾತಂಡಗಳ ತಾಳಕ್ಕೆ ಅಭಿಮಾನಿಗಳು ಹೆಜ್ಜೆ ಕುಣಿಯುತ್ತಾ ಸಾಗುತ್ತಾ ಸಂಭ್ರಮಿಸಿದರು.

ಶ್ರೀವತ್ಸ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಎಸ್.ಎ. ರಾಮದಾಸ್ ಮೊದಲಾದವರ ಫೋಟೊಗಳನ್ನು ಹಿಡಿದಿದ್ದುದು ಗಮನಸೆಳೆಯಿತು. ಪಕ್ಷದ ಬಾವುಟಗಳು ರಾರಾಜಿಸಿದವು. ಆ ಮಾರ್ಗದಲ್ಲಿ ವಾಹನಗಳ ದಟ್ಟಣೆ ಉಂಟಾಗಿತ್ತು. ಇದರಿಂದ ದ್ವಿಚಕ್ರವಾಹನ ಸವಾರರು ಹಾಗೂ ವಾಹನ ಚಾಲಕರು ಮತ್ತು ಜನರು ತೊಂದರೆ ಅನುಭವಿಸಿದರು.

ಇದಕ್ಕೂ ಮುನ್ನ, ಅಭ್ಯರ್ಥಿ ಶ್ರೀವತ್ಸ ಚಾಮುಂಡೇಶ್ವರಿ ದೇವಸ್ಥಾನಕ್ಕೆ, ಶಂಕರ ಮಠಕ್ಕೆ, ಉತ್ತರಾದಿಮಠಕ್ಕೆ, ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

‘ರಾಮದಾಸ್ ಕನಸು ನನಸಿಗೆ ಶ್ರಮಿಸುವೆ’

‘ಶಾಸಕ ರಾಮದಾಸ್ ಅವರ ಕನಸುಗಳನ್ನು ಈಡೇರಿಸಲು ನಾನು ಶ್ರಮಿಸುತ್ತೇನೆ’ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ತಿಳಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ‘ಸ್ಪರ್ಧೆ ನನಗೆ ಮೊದಲ ಬಾರಿಯಾದರೂ ಸಾರಥಿಯಾಗಿ 17 ಚುನಾವಣೆಗಳನ್ನು ಮಾಡಿದ್ದೇನೆ. ಕಾರ್ಯಕರ್ತರು ಎಲ್ಲಿದ್ದಾರೆ, ಯಾವ ರೀತಿ ಅವರನ್ನು ಭೇಟಿಯಾಗಬೇಕು, ಸರ್ಕಾರದ ಸಾಧನೆಯನ್ನು ಹೇಗೆ ಮನವರಿಕೆ ಮಾಡಿಕೊಡಬೇಕು ಎಂಬುದು ತಿಳಿದಿದೆ’ ಎಂದರು.

‘ಎಲ್ಲರೂ ತಂಡವಾಗಿ ಕಾರ್ಯನಿರ್ವಹಿಸಲಿದ್ದೇವೆ. ಹೀಗಾಗಿ ರಾಮದಾಸ್, ಶ್ರೀವತ್ಸ ತಂಡ ಎಂಬುದಿಲ್ಲ. ರಾಮದಾಸ್ ಅವರಿಗೆ ಟಿಕೆಟ್ ಸಿಗದಿದ್ದರಿಂದ ಸಹಜವಾಗಿ ಅವರ ಬೆಂಬಲಿಗರಲ್ಲಿ ಸ್ವಲ್ಪ ಬೇಸರವಿತ್ತು. ಈಗ ಎಲ್ಲವೂ ಬಗೆಹರಿದಿದೆ’ ಎಂದು ಹೇಳಿದರು.

‘ರಾಮದಾಸ್, ಮುಖಂಡ ಎಚ್‌.ವಿ. ರಾಜೀವ್ ಹಾಗೂ ಅಸಂಖ್ಯಾತ ಕಾರ್ಯಕರ್ತರು ರೂವಾರಿಗಳಾಗಿ ಕೆಲಸ ಮಾಡಲಿದ್ದಾರೆ. ರಾಜೀವ್ ಅವರು ಅನ್ಯಕಾರ್ಯದಲ್ಲಿದ್ದಿದ್ದರಿಂದ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಂದಿಲ್ಲ’ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

14 mins ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

21 mins ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

5 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

5 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

6 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

7 hours ago