ಮೈಸೂರು

ಕೃಷ್ಣರಾಜ: BJP ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಕೆ, ರಾಮದಾಸ್ ಸಾಥ್

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿ.ಎಸ್. ಶ್ರೀವತ್ಸ ಗುರುವಾರ ನಾಮಪತ್ರ ಸಲ್ಲಿಸಿದರು.
ಪಾಲಿಕೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಮುಖಂಡ ತೋಂಟದಾರ್ಯ, ಶಾಸಕ ರಾಮದಾಸ್, ಸಂಸದ ಪ್ರತಾಪ ಸಿಂಹ ಮತ್ತು ಮೇಯರ್‌ ಶಿವಕುಮಾರ್ ಸಾಥ್ ನೀಡಿದರು.

ಇದಕ್ಕೂ ಮುನ್ನ ಮೆರವಣಿಗೆ ಹಾಗೂ ಶಕ್ತಿಪ್ರದರ್ಶನ ನಡೆಯಿತು. ಅಗ್ರಹಾರದ 101 ಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರರು ಮಂದಿ ಪಾಲ್ಗೊಂಡಿದ್ದರು.

ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ತೆರೆದ ವಾಹನದಲ್ಲಿ ಟಿ.ಎಸ್. ಶ್ರೀವತ್ಸ, ಹಾಲಿ ಶಾಸಕ ಹಾಗೂ ಈ ಬಾರಿ ಟಿಕೆಟ್‌ ತಪ್ಪಿಸಿಕೊಂಡ ಎಸ್.ಎ.ರಾಮದಾಸ್, ಮೇಯರ್ ಶಿವಕುಮಾರ್, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್ ಮೊದಲಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಸ್ಥಾನಕ್ಕೆ ಬಂದ ರಾಮದಾಸ್ ಅವರನ್ನು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಗಲ ಮೇಲೆ ಕೂರಿಸಿಕೊಂಡು ಬಂದು ತೆರೆದ ವಾಹನದವರೆಗೆ ಕರೆತಂದರು. ಶಾಸಕ ಎಲ್.ನಾಗೇಂದ್ರ ಮೊದಲಾದವರು ಪಾಲ್ಗೊಂಡಿದ್ದರು. ಮೆರವಣಿಗೆಗೆ ಮೆರುಗು ನೀಡಿದ ವೀರಗಾಸೆ, ನಗಾರಿ, ಡೊಳ್ಳು ಮೊದಲಾದ ಕಲಾತಂಡಗಳ ತಾಳಕ್ಕೆ ಅಭಿಮಾನಿಗಳು ಹೆಜ್ಜೆ ಕುಣಿಯುತ್ತಾ ಸಾಗುತ್ತಾ ಸಂಭ್ರಮಿಸಿದರು.

ಶ್ರೀವತ್ಸ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಎಸ್.ಎ. ರಾಮದಾಸ್ ಮೊದಲಾದವರ ಫೋಟೊಗಳನ್ನು ಹಿಡಿದಿದ್ದುದು ಗಮನಸೆಳೆಯಿತು. ಪಕ್ಷದ ಬಾವುಟಗಳು ರಾರಾಜಿಸಿದವು. ಆ ಮಾರ್ಗದಲ್ಲಿ ವಾಹನಗಳ ದಟ್ಟಣೆ ಉಂಟಾಗಿತ್ತು. ಇದರಿಂದ ದ್ವಿಚಕ್ರವಾಹನ ಸವಾರರು ಹಾಗೂ ವಾಹನ ಚಾಲಕರು ಮತ್ತು ಜನರು ತೊಂದರೆ ಅನುಭವಿಸಿದರು.

ಇದಕ್ಕೂ ಮುನ್ನ, ಅಭ್ಯರ್ಥಿ ಶ್ರೀವತ್ಸ ಚಾಮುಂಡೇಶ್ವರಿ ದೇವಸ್ಥಾನಕ್ಕೆ, ಶಂಕರ ಮಠಕ್ಕೆ, ಉತ್ತರಾದಿಮಠಕ್ಕೆ, ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

‘ರಾಮದಾಸ್ ಕನಸು ನನಸಿಗೆ ಶ್ರಮಿಸುವೆ’

‘ಶಾಸಕ ರಾಮದಾಸ್ ಅವರ ಕನಸುಗಳನ್ನು ಈಡೇರಿಸಲು ನಾನು ಶ್ರಮಿಸುತ್ತೇನೆ’ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ತಿಳಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ‘ಸ್ಪರ್ಧೆ ನನಗೆ ಮೊದಲ ಬಾರಿಯಾದರೂ ಸಾರಥಿಯಾಗಿ 17 ಚುನಾವಣೆಗಳನ್ನು ಮಾಡಿದ್ದೇನೆ. ಕಾರ್ಯಕರ್ತರು ಎಲ್ಲಿದ್ದಾರೆ, ಯಾವ ರೀತಿ ಅವರನ್ನು ಭೇಟಿಯಾಗಬೇಕು, ಸರ್ಕಾರದ ಸಾಧನೆಯನ್ನು ಹೇಗೆ ಮನವರಿಕೆ ಮಾಡಿಕೊಡಬೇಕು ಎಂಬುದು ತಿಳಿದಿದೆ’ ಎಂದರು.

‘ಎಲ್ಲರೂ ತಂಡವಾಗಿ ಕಾರ್ಯನಿರ್ವಹಿಸಲಿದ್ದೇವೆ. ಹೀಗಾಗಿ ರಾಮದಾಸ್, ಶ್ರೀವತ್ಸ ತಂಡ ಎಂಬುದಿಲ್ಲ. ರಾಮದಾಸ್ ಅವರಿಗೆ ಟಿಕೆಟ್ ಸಿಗದಿದ್ದರಿಂದ ಸಹಜವಾಗಿ ಅವರ ಬೆಂಬಲಿಗರಲ್ಲಿ ಸ್ವಲ್ಪ ಬೇಸರವಿತ್ತು. ಈಗ ಎಲ್ಲವೂ ಬಗೆಹರಿದಿದೆ’ ಎಂದು ಹೇಳಿದರು.

‘ರಾಮದಾಸ್, ಮುಖಂಡ ಎಚ್‌.ವಿ. ರಾಜೀವ್ ಹಾಗೂ ಅಸಂಖ್ಯಾತ ಕಾರ್ಯಕರ್ತರು ರೂವಾರಿಗಳಾಗಿ ಕೆಲಸ ಮಾಡಲಿದ್ದಾರೆ. ರಾಜೀವ್ ಅವರು ಅನ್ಯಕಾರ್ಯದಲ್ಲಿದ್ದಿದ್ದರಿಂದ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಂದಿಲ್ಲ’ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago