ಮೈಸೂರು: ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು ಎಸ್ಯುಸಿಐಸಿ (ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್) ಪಕ್ಷದ ಪಿ.ಎಸ್.ಸಂಧ್ಯಾ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಪಕ್ಷದ ಜಿಲ್ಲಾ ಸಮಿತಿಯಿಂದ ರಾಮಸ್ವಾಮಿ ವೃತ್ತದಿಂದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಗರಪಾಲಿಕೆ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.
ಎಸ್ಯುಸಿಐಸಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಿ.ರವಿ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿ, ‘ರಾಜಕೀಯ ಹಾಗೂ ರಾಜಕಾರಣಿಗಳೆಂದರೆ ಅಸಹ್ಯ ಪಡುವಂತಹ ಪರಿಸ್ಥಿತಿ ನಮ್ಮ ಮುಂದಿದೆ. ಆದರೆ, ರಾಜಕೀಯವನ್ನು ಜನರ ವಿಮೋಚನೆಗಾಗಿ ಹೋರಾಡುವ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕಿದೆ. ಈ ಕೆಲಸವನ್ನು ನಮ್ಮ ಪಕ್ಷವು ಮಾಡುತ್ತಿದೆ. ಅಧಿಕಾರದ ರಾಜಕೀಯಕ್ಕೆ ಪರ್ಯಾಯವಾಗಿ ಹೋರಾಟದ ರಾಜಕೀಯವನ್ನು ನಮ್ಮ ಪಕ್ಷ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ’ ಎಂದರು.
‘ಜನ ಹೋರಾಟಗಳ ಮಧ್ಯೆ ಚುನಾವಣೆಗಳು ಬಂದಾಗ ನಮ್ಮ ಪಕ್ಷ ಅದರಲ್ಲೂ ಭಾಗವಹಿಸುತ್ತದೆ. ಒಂದಷ್ಟು ಸೀಟು, ಅಧಿಕಾರ ಗಿಟ್ಟಿಸುವ ತಂತ್ರಗಾರಿಕೆಯ ಭಾಗವಾಗಿ ಚುನಾವಣೆಯನ್ನು ನಾವು ಬಳಸಿಕೊಳ್ಳುವುದಿಲ್ಲ. ಜನ ಹೋರಾಟಗಳ ಪರವಾಗಿ ಸದನದ ಹೊರಗೆ ಮತ್ತು ಒಳಗೆ ದನಿ ಎತ್ತುವುದು ನಮ್ಮ ಪಕ್ಷದ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.
‘ಪಕ್ಷದ ಅಭ್ಯರ್ಥಿ ಪಿ.ಎಸ್.ಸಂಧ್ಯಾ 28 ವರ್ಷಗಳಿಂದ ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರ ಚಳವಳಿಗೆ ನಾಯಕತ್ವ ನೀಡುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಎಂಎಸ್ಡಬ್ಲ್ಯು ಸ್ನಾತಕೋತ್ತರ ಪದವಿ ಪಡೆದು, ಪ್ರಸ್ತುತ ಜನ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಾರ್ಮಿಕರು, ಜನಸಾಮಾನ್ಯರು ಹಾಗೂ ರೈತರ ಪರವಾಗಿ ಹೋರಾಡುವ ಅಭ್ಯರ್ಥಿಗಳನ್ನು ಜನರು ಬೆಂಬಲಿಸಬೇಕು’ ಎಂದು ಕೋರಿದರು.
‘ಜನಸಾಮಾನ್ಯರ ಜೀವನ ಸುಧಾರಣೆಗಾಗಿ ಮತದಾರರು ನನ್ನನ್ನು ಬೆಂಬಲಿಸಬೇಕು’ ಎಂದು ಸಂಧ್ಯಾ ಮನವಿ ಮಾಡಿದರು.
ಜಿಲ್ಲಾ ಸಮಿತಿಯ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ವಿ.ಯಶೋಧರ, ಸೀಮಾ ಜಿ.ಎಸ್., ಹರೀಶ್, ಸುನೀಲ್, ಸುಮಾ, ಸುಭಾಷ್, ಚಂದ್ರಕಲಾ, ಪುಷ್ಪಾ, ಅಭಿಲಾಷ ಮತ್ತು ನೀತು ಇದ್ದರು.
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…