ಮೈಸೂರು

ಕೃಷ್ಣರಾಜ ಕ್ಷೇತ್ರ: ಎಸ್‌ಯುಸಿಐಸಿ ಅಭ್ಯರ್ಥಿ ಸಂಧ್ಯಾ ನಾಮಪತ್ರ

ಮೈಸೂರು: ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು ಎಸ್‌ಯುಸಿಐಸಿ (ಸೋಷಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ ಕಮ್ಯುನಿಸ್ಟ್) ಪಕ್ಷದ ಪಿ.ಎಸ್.ಸಂಧ್ಯಾ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಪಕ್ಷದ ಜಿಲ್ಲಾ ಸಮಿತಿಯಿಂದ ರಾಮಸ್ವಾಮಿ ವೃತ್ತದಿಂದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಗರಪಾಲಿಕೆ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.

ಎಸ್‌ಯುಸಿಐಸಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಿ.ರವಿ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿ, ‘ರಾಜಕೀಯ ಹಾಗೂ ರಾಜಕಾರಣಿಗಳೆಂದರೆ ಅಸಹ್ಯ ಪಡುವಂತಹ ಪರಿಸ್ಥಿತಿ ನಮ್ಮ ಮುಂದಿದೆ. ಆದರೆ, ರಾಜಕೀಯವನ್ನು ಜನರ ವಿಮೋಚನೆಗಾಗಿ ಹೋರಾಡುವ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕಿದೆ. ಈ ಕೆಲಸವನ್ನು ನಮ್ಮ ಪಕ್ಷವು ಮಾಡುತ್ತಿದೆ. ಅಧಿಕಾರದ ರಾಜಕೀಯಕ್ಕೆ ಪರ್ಯಾಯವಾಗಿ ಹೋರಾಟದ ರಾಜಕೀಯವನ್ನು ನಮ್ಮ ಪಕ್ಷ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ’ ಎಂದರು.

‘ಜನ ಹೋರಾಟಗಳ ಮಧ್ಯೆ ಚುನಾವಣೆಗಳು ಬಂದಾಗ ನಮ್ಮ ಪಕ್ಷ ಅದರಲ್ಲೂ ಭಾಗವಹಿಸುತ್ತದೆ. ಒಂದಷ್ಟು ಸೀಟು, ಅಧಿಕಾರ ಗಿಟ್ಟಿಸುವ ತಂತ್ರಗಾರಿಕೆಯ ಭಾಗವಾಗಿ ಚುನಾವಣೆಯನ್ನು ನಾವು ಬಳಸಿಕೊಳ್ಳುವುದಿಲ್ಲ. ಜನ ಹೋರಾಟಗಳ ಪರವಾಗಿ ಸದನದ ಹೊರಗೆ ಮತ್ತು ಒಳಗೆ ದನಿ ಎತ್ತುವುದು ನಮ್ಮ ಪಕ್ಷದ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.

‘ಪಕ್ಷದ ಅಭ್ಯರ್ಥಿ ಪಿ.ಎಸ್.ಸಂಧ್ಯಾ 28 ವರ್ಷಗಳಿಂದ ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರ ಚಳವಳಿಗೆ ನಾಯಕತ್ವ ನೀಡುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಎಂಎಸ್‌ಡಬ್ಲ್ಯು ಸ್ನಾತಕೋತ್ತರ ಪದವಿ ಪಡೆದು, ಪ್ರಸ್ತುತ ಜನ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಾರ್ಮಿಕರು, ಜನಸಾಮಾನ್ಯರು ಹಾಗೂ ರೈತರ ಪರವಾಗಿ ಹೋರಾಡುವ ಅಭ್ಯರ್ಥಿಗಳನ್ನು ಜನರು ಬೆಂಬಲಿಸಬೇಕು’ ಎಂದು ಕೋರಿದರು.

‘ಜನಸಾಮಾನ್ಯರ ಜೀವನ ಸುಧಾರಣೆಗಾಗಿ ಮತದಾರರು ನನ್ನನ್ನು ಬೆಂಬಲಿಸಬೇಕು’ ಎಂದು ಸಂಧ್ಯಾ ಮನವಿ ಮಾಡಿದರು.

ಜಿಲ್ಲಾ ಸಮಿತಿಯ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ವಿ.ಯಶೋಧರ, ಸೀಮಾ ಜಿ.ಎಸ್., ಹರೀಶ್, ಸುನೀಲ್, ಸುಮಾ, ಸುಭಾಷ್, ಚಂದ್ರಕಲಾ, ಪುಷ್ಪಾ, ಅಭಿಲಾಷ ಮತ್ತು ನೀತು ಇದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago