KRS | Large Volume of Water Released into Cauvery River: Advisory Issued for Precaution
ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಹಳೆ ಮೈಸೂರು ಭಾಗದ ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 17,894 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 13,359 ಕ್ಯೂಸೆಕ್ಸ್ಗಳಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 122.90 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 46.835 ಟಿಎಂಸಿ ನೀರು ಸಂಗ್ರಹವಾಗಿದೆ.
ಇನ್ನು ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.
ಜಲಾಶಯದ ಇಂದಿನ ಒಳಹರಿವು 10,995 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 12,000 ಕ್ಯೂಸೆಕ್ಸ್ಗಳಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 81 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದೆ.
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…