ಮೈಸೂರು

ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾತೃ ವಿವಾದ : ಸಚಿವ ಎಚ್‌ಸಿಎಂ ಹೇಳಿಕೆ ತಿರುಚುವು ಹುನ್ನಾರ ನಡೆದಿದೆ ; ಪುರುಷೊತ್ತಮ್‌ ಆರೋಪ

ಮೈಸೂರು : ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ ವಿಚಾರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ಹತ್ತಿರವಾಗಿದೆ. ಆದರೆ, ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್.ಎಸ್ ಅಣೆಕಟ್ಟೆಗೆ ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂದು ಅವರ ಸಾಧನೆ ಬಗ್ಗೆ ಹೇಳಿದ್ದಾರೆ. ಇತಿಹಾಸದ ಸತ್ಯವನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ಸಾಕ್ಷಿಯೂ ಇದೆ ಎಂದರು.

1911 ರ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ವೇಳೆ ಟಿಪ್ಪು ಸುಲ್ತಾನರ ಅಡಿಗಲ್ಲು ಸಿಕ್ಕಿದೆ. ಅದನ್ನು ಕೂಡ ಅಣೆಕಟ್ಟೆ ಬಳಿ ಸ್ಥಾಪನೆ ಮಾಡಿದ್ದಾರೆ. ಕೆಆರ್‌ಎಸ್ ನಿರ್ಮಾತೃ ನಾಲ್ವಡಿಯವರೇ ಎಂಬುದರಲ್ಲಿ ಎರಡು ಮಾತಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅತೀ ಹೆಚ್ಚು ಗೌರವ ಕೊಡುವುದು ದಲಿತ ಸಮುದಾಯ. ಮಹದೇವಪ್ಪ ಅವರು ನಾಲ್ವಡಿ ವಿರುದ್ಧ, ರಾಜಮನೆತನದವರ ವಿರುದ್ಧ ಮಾತನಾಡಿಲ್ಲ. ಹೀಗಾಗಿ ಮುಸ್ಲಿಂ ಸಮುದಾಯದ ಓಲೈಕೆಗಾಗಿ ಮಾತನಾಡಿದ್ದಾರೆ ಎಂಬುದು ಸುಳ್ಳು. ಕೂಡಲೇ ಇಂತಹ ವಿವಾದ ಸೃಷ್ಟಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ವಿಶ್ವೇಶ್ವರಯ್ಯ ಇಂಜಿನಿಯರ್ ಅಷ್ಟೇ
ಕೆಆರ್‌ಎಸ್ ಅಣೆಕಟ್ಟೆ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾನವಾಗಿ ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಮೊದಲು ಆ ಪ್ರತಿಮೆಯನ್ನು ತೆಗೆಯಬೇಕು. ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸರಿ ಸಮಾನವೇ? ವಿಶ್ವೇಶ್ವರಯ್ಯ ಅವರು ಒಬ್ಬ ಇಂಜಿನಿಯರ್ ಅಷ್ಟೇ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ಸಚಿವ ಎಚ್.ಸಿ.ಮಹದೇವಪ್ಪ ಟಿಪ್ಪು ಸುಲ್ತಾನ್ ಕೆಆರ್‌ಎಸ್ ಅಣೆಕಟ್ಟೆ ಕಟ್ಟಲು ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಅಷ್ಟೇ. ಕನ್ನಂಬಾಡಿ ಕಟ್ಟೆಗೆ ಹೋಗಿ ನೋಡಿ ಗೇಟಿನ ಒಳ ಭಾಗದಲ್ಲಿ 3 ಕಲ್ಲುಗಳಿವೆ. ಒಂದು ಅರೇಬಿಕ್, ಒಂದು ಇಂಗ್ಲಿಷ್, ಒಂದು ಕನ್ನಡದಲ್ಲಿ ಇದೆ. ಅದರಲ್ಲಿ ಭಗವಂತನ ಕರುಣೆಯಿಂದ ಆಣೆಕಟ್ಟೆ ಕಟ್ಟಿಸಲು ಹೊರಟಿದ್ದೇನೆ, ಶಂಕುಸ್ಥಾಪನೆ ಮಾಡಿದ್ದೇನೆ ಎಂದು ಬರೆದಿದೆ ಎಂದರು.

ಇತಿಹಾಸವನ್ನು ಅರಿಯದೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಟಿಪ್ಪು ತನ್ನ ಆಡಳಿತದಲ್ಲಿ ಎಲ್ಲ ಸಮುದಾಯದ ಪರವಾಗಿದ್ದರು. ಒಂದು ವೇಳೆ ಮತಾಂಧನಾಗಿದ್ದರೆ ಶ್ರೀರಂಗಪಟ್ಟಣದಲ್ಲಿ ಎಲ್ಲರೂ ಮುಸ್ಲಿಮರಾಗಿ ಪರಿವರ್ತನೆ ಆಗಿರಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಚಿತ್ರಗೀತೆಯೊಂದರಲ್ಲಿ ಡಾ.ರಾಜಕುಮಾರ್ ಅವರಿಂದ ‘ಕಾವೇರಿಯನ್ನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ’ ಎಂದು ಹಾಡಿಸಿದ್ದಾರೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುವ ಸಾಲುಗಳು. ಇದರಿಂದ ಕನ್ನಂಬಾಡಿ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡಿದಂತೆ. ಏಕೆಂದರೆ ಅಣೆಕಟ್ಟೆ ಕಟ್ಟುವಾಗ ವಿಶ್ವೇಶ್ವರಯ್ಯ ಒಂದು ವರ್ಷ ಮಾತ್ರ ಇದ್ದರು. ಕನ್ನಂಬಾಡಿ ಕಟ್ಟೆ ಕಟ್ಟಲು 21 ವರ್ಷಗಳು ಬೇಕಾಯಿತು ಎಂದು ವಿವರಿಸಿದರು.

ಲೇಖಕ ಸಿದ್ದಸ್ವಾಮಿ ಮಾತನಾಡಿ, ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣದಲ್ಲಿ ನಾಲ್ವಡಿ ಅವರೊಂದಿಗೆ ಶ್ರಮಿಸಿದವರು ಮಿರ್ಜಾ ಇಸ್ಮಾಯಿಲ್ ಹೊರತು ವಿಶ್ವೇಶ್ವರಯ್ಯ ಅಲ್ಲ ಎಂದರು. ಪತ್ರಕರ್ತ ಸೋಮಯ್ಯ ಮಲೆಯೂರು, ದಸಂಸ ಜಿಲ್ಲಾ ಸಂಚಾಲಕ ಭುಗತಗಳ್ಳಿ ಮಣಿಯಯ್ಯ, ದಲಿತ ಮುಖಂಡ ಪುಟ್ಟರಾಜು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

8 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

9 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

9 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

9 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

9 hours ago