ಮೈಸೂರು

ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾತೃ ವಿವಾದ : ಸಚಿವ ಎಚ್‌ಸಿಎಂ ಹೇಳಿಕೆ ತಿರುಚುವು ಹುನ್ನಾರ ನಡೆದಿದೆ ; ಪುರುಷೊತ್ತಮ್‌ ಆರೋಪ

ಮೈಸೂರು : ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ ವಿಚಾರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ಹತ್ತಿರವಾಗಿದೆ. ಆದರೆ, ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್.ಎಸ್ ಅಣೆಕಟ್ಟೆಗೆ ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂದು ಅವರ ಸಾಧನೆ ಬಗ್ಗೆ ಹೇಳಿದ್ದಾರೆ. ಇತಿಹಾಸದ ಸತ್ಯವನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ಸಾಕ್ಷಿಯೂ ಇದೆ ಎಂದರು.

1911 ರ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ವೇಳೆ ಟಿಪ್ಪು ಸುಲ್ತಾನರ ಅಡಿಗಲ್ಲು ಸಿಕ್ಕಿದೆ. ಅದನ್ನು ಕೂಡ ಅಣೆಕಟ್ಟೆ ಬಳಿ ಸ್ಥಾಪನೆ ಮಾಡಿದ್ದಾರೆ. ಕೆಆರ್‌ಎಸ್ ನಿರ್ಮಾತೃ ನಾಲ್ವಡಿಯವರೇ ಎಂಬುದರಲ್ಲಿ ಎರಡು ಮಾತಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅತೀ ಹೆಚ್ಚು ಗೌರವ ಕೊಡುವುದು ದಲಿತ ಸಮುದಾಯ. ಮಹದೇವಪ್ಪ ಅವರು ನಾಲ್ವಡಿ ವಿರುದ್ಧ, ರಾಜಮನೆತನದವರ ವಿರುದ್ಧ ಮಾತನಾಡಿಲ್ಲ. ಹೀಗಾಗಿ ಮುಸ್ಲಿಂ ಸಮುದಾಯದ ಓಲೈಕೆಗಾಗಿ ಮಾತನಾಡಿದ್ದಾರೆ ಎಂಬುದು ಸುಳ್ಳು. ಕೂಡಲೇ ಇಂತಹ ವಿವಾದ ಸೃಷ್ಟಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ವಿಶ್ವೇಶ್ವರಯ್ಯ ಇಂಜಿನಿಯರ್ ಅಷ್ಟೇ
ಕೆಆರ್‌ಎಸ್ ಅಣೆಕಟ್ಟೆ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾನವಾಗಿ ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಮೊದಲು ಆ ಪ್ರತಿಮೆಯನ್ನು ತೆಗೆಯಬೇಕು. ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸರಿ ಸಮಾನವೇ? ವಿಶ್ವೇಶ್ವರಯ್ಯ ಅವರು ಒಬ್ಬ ಇಂಜಿನಿಯರ್ ಅಷ್ಟೇ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ಸಚಿವ ಎಚ್.ಸಿ.ಮಹದೇವಪ್ಪ ಟಿಪ್ಪು ಸುಲ್ತಾನ್ ಕೆಆರ್‌ಎಸ್ ಅಣೆಕಟ್ಟೆ ಕಟ್ಟಲು ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಅಷ್ಟೇ. ಕನ್ನಂಬಾಡಿ ಕಟ್ಟೆಗೆ ಹೋಗಿ ನೋಡಿ ಗೇಟಿನ ಒಳ ಭಾಗದಲ್ಲಿ 3 ಕಲ್ಲುಗಳಿವೆ. ಒಂದು ಅರೇಬಿಕ್, ಒಂದು ಇಂಗ್ಲಿಷ್, ಒಂದು ಕನ್ನಡದಲ್ಲಿ ಇದೆ. ಅದರಲ್ಲಿ ಭಗವಂತನ ಕರುಣೆಯಿಂದ ಆಣೆಕಟ್ಟೆ ಕಟ್ಟಿಸಲು ಹೊರಟಿದ್ದೇನೆ, ಶಂಕುಸ್ಥಾಪನೆ ಮಾಡಿದ್ದೇನೆ ಎಂದು ಬರೆದಿದೆ ಎಂದರು.

ಇತಿಹಾಸವನ್ನು ಅರಿಯದೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಟಿಪ್ಪು ತನ್ನ ಆಡಳಿತದಲ್ಲಿ ಎಲ್ಲ ಸಮುದಾಯದ ಪರವಾಗಿದ್ದರು. ಒಂದು ವೇಳೆ ಮತಾಂಧನಾಗಿದ್ದರೆ ಶ್ರೀರಂಗಪಟ್ಟಣದಲ್ಲಿ ಎಲ್ಲರೂ ಮುಸ್ಲಿಮರಾಗಿ ಪರಿವರ್ತನೆ ಆಗಿರಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಚಿತ್ರಗೀತೆಯೊಂದರಲ್ಲಿ ಡಾ.ರಾಜಕುಮಾರ್ ಅವರಿಂದ ‘ಕಾವೇರಿಯನ್ನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ’ ಎಂದು ಹಾಡಿಸಿದ್ದಾರೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುವ ಸಾಲುಗಳು. ಇದರಿಂದ ಕನ್ನಂಬಾಡಿ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡಿದಂತೆ. ಏಕೆಂದರೆ ಅಣೆಕಟ್ಟೆ ಕಟ್ಟುವಾಗ ವಿಶ್ವೇಶ್ವರಯ್ಯ ಒಂದು ವರ್ಷ ಮಾತ್ರ ಇದ್ದರು. ಕನ್ನಂಬಾಡಿ ಕಟ್ಟೆ ಕಟ್ಟಲು 21 ವರ್ಷಗಳು ಬೇಕಾಯಿತು ಎಂದು ವಿವರಿಸಿದರು.

ಲೇಖಕ ಸಿದ್ದಸ್ವಾಮಿ ಮಾತನಾಡಿ, ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣದಲ್ಲಿ ನಾಲ್ವಡಿ ಅವರೊಂದಿಗೆ ಶ್ರಮಿಸಿದವರು ಮಿರ್ಜಾ ಇಸ್ಮಾಯಿಲ್ ಹೊರತು ವಿಶ್ವೇಶ್ವರಯ್ಯ ಅಲ್ಲ ಎಂದರು. ಪತ್ರಕರ್ತ ಸೋಮಯ್ಯ ಮಲೆಯೂರು, ದಸಂಸ ಜಿಲ್ಲಾ ಸಂಚಾಲಕ ಭುಗತಗಳ್ಳಿ ಮಣಿಯಯ್ಯ, ದಲಿತ ಮುಖಂಡ ಪುಟ್ಟರಾಜು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

1 hour ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago