ಮೈಸೂರು

ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾತೃ ವಿವಾದ : ಸಚಿವ ಎಚ್‌ಸಿಎಂ ಹೇಳಿಕೆ ತಿರುಚುವು ಹುನ್ನಾರ ನಡೆದಿದೆ ; ಪುರುಷೊತ್ತಮ್‌ ಆರೋಪ

ಮೈಸೂರು : ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ ವಿಚಾರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ಹತ್ತಿರವಾಗಿದೆ. ಆದರೆ, ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್.ಎಸ್ ಅಣೆಕಟ್ಟೆಗೆ ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂದು ಅವರ ಸಾಧನೆ ಬಗ್ಗೆ ಹೇಳಿದ್ದಾರೆ. ಇತಿಹಾಸದ ಸತ್ಯವನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ಸಾಕ್ಷಿಯೂ ಇದೆ ಎಂದರು.

1911 ರ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ವೇಳೆ ಟಿಪ್ಪು ಸುಲ್ತಾನರ ಅಡಿಗಲ್ಲು ಸಿಕ್ಕಿದೆ. ಅದನ್ನು ಕೂಡ ಅಣೆಕಟ್ಟೆ ಬಳಿ ಸ್ಥಾಪನೆ ಮಾಡಿದ್ದಾರೆ. ಕೆಆರ್‌ಎಸ್ ನಿರ್ಮಾತೃ ನಾಲ್ವಡಿಯವರೇ ಎಂಬುದರಲ್ಲಿ ಎರಡು ಮಾತಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅತೀ ಹೆಚ್ಚು ಗೌರವ ಕೊಡುವುದು ದಲಿತ ಸಮುದಾಯ. ಮಹದೇವಪ್ಪ ಅವರು ನಾಲ್ವಡಿ ವಿರುದ್ಧ, ರಾಜಮನೆತನದವರ ವಿರುದ್ಧ ಮಾತನಾಡಿಲ್ಲ. ಹೀಗಾಗಿ ಮುಸ್ಲಿಂ ಸಮುದಾಯದ ಓಲೈಕೆಗಾಗಿ ಮಾತನಾಡಿದ್ದಾರೆ ಎಂಬುದು ಸುಳ್ಳು. ಕೂಡಲೇ ಇಂತಹ ವಿವಾದ ಸೃಷ್ಟಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ವಿಶ್ವೇಶ್ವರಯ್ಯ ಇಂಜಿನಿಯರ್ ಅಷ್ಟೇ
ಕೆಆರ್‌ಎಸ್ ಅಣೆಕಟ್ಟೆ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾನವಾಗಿ ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಮೊದಲು ಆ ಪ್ರತಿಮೆಯನ್ನು ತೆಗೆಯಬೇಕು. ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸರಿ ಸಮಾನವೇ? ವಿಶ್ವೇಶ್ವರಯ್ಯ ಅವರು ಒಬ್ಬ ಇಂಜಿನಿಯರ್ ಅಷ್ಟೇ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ಸಚಿವ ಎಚ್.ಸಿ.ಮಹದೇವಪ್ಪ ಟಿಪ್ಪು ಸುಲ್ತಾನ್ ಕೆಆರ್‌ಎಸ್ ಅಣೆಕಟ್ಟೆ ಕಟ್ಟಲು ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಅಷ್ಟೇ. ಕನ್ನಂಬಾಡಿ ಕಟ್ಟೆಗೆ ಹೋಗಿ ನೋಡಿ ಗೇಟಿನ ಒಳ ಭಾಗದಲ್ಲಿ 3 ಕಲ್ಲುಗಳಿವೆ. ಒಂದು ಅರೇಬಿಕ್, ಒಂದು ಇಂಗ್ಲಿಷ್, ಒಂದು ಕನ್ನಡದಲ್ಲಿ ಇದೆ. ಅದರಲ್ಲಿ ಭಗವಂತನ ಕರುಣೆಯಿಂದ ಆಣೆಕಟ್ಟೆ ಕಟ್ಟಿಸಲು ಹೊರಟಿದ್ದೇನೆ, ಶಂಕುಸ್ಥಾಪನೆ ಮಾಡಿದ್ದೇನೆ ಎಂದು ಬರೆದಿದೆ ಎಂದರು.

ಇತಿಹಾಸವನ್ನು ಅರಿಯದೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಟಿಪ್ಪು ತನ್ನ ಆಡಳಿತದಲ್ಲಿ ಎಲ್ಲ ಸಮುದಾಯದ ಪರವಾಗಿದ್ದರು. ಒಂದು ವೇಳೆ ಮತಾಂಧನಾಗಿದ್ದರೆ ಶ್ರೀರಂಗಪಟ್ಟಣದಲ್ಲಿ ಎಲ್ಲರೂ ಮುಸ್ಲಿಮರಾಗಿ ಪರಿವರ್ತನೆ ಆಗಿರಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಚಿತ್ರಗೀತೆಯೊಂದರಲ್ಲಿ ಡಾ.ರಾಜಕುಮಾರ್ ಅವರಿಂದ ‘ಕಾವೇರಿಯನ್ನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ’ ಎಂದು ಹಾಡಿಸಿದ್ದಾರೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುವ ಸಾಲುಗಳು. ಇದರಿಂದ ಕನ್ನಂಬಾಡಿ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡಿದಂತೆ. ಏಕೆಂದರೆ ಅಣೆಕಟ್ಟೆ ಕಟ್ಟುವಾಗ ವಿಶ್ವೇಶ್ವರಯ್ಯ ಒಂದು ವರ್ಷ ಮಾತ್ರ ಇದ್ದರು. ಕನ್ನಂಬಾಡಿ ಕಟ್ಟೆ ಕಟ್ಟಲು 21 ವರ್ಷಗಳು ಬೇಕಾಯಿತು ಎಂದು ವಿವರಿಸಿದರು.

ಲೇಖಕ ಸಿದ್ದಸ್ವಾಮಿ ಮಾತನಾಡಿ, ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣದಲ್ಲಿ ನಾಲ್ವಡಿ ಅವರೊಂದಿಗೆ ಶ್ರಮಿಸಿದವರು ಮಿರ್ಜಾ ಇಸ್ಮಾಯಿಲ್ ಹೊರತು ವಿಶ್ವೇಶ್ವರಯ್ಯ ಅಲ್ಲ ಎಂದರು. ಪತ್ರಕರ್ತ ಸೋಮಯ್ಯ ಮಲೆಯೂರು, ದಸಂಸ ಜಿಲ್ಲಾ ಸಂಚಾಲಕ ಭುಗತಗಳ್ಳಿ ಮಣಿಯಯ್ಯ, ದಲಿತ ಮುಖಂಡ ಪುಟ್ಟರಾಜು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

14 hours ago