ಮೈಸೂರು: ಆರ್ಟಿಐ ಅರ್ಜಿದಾರರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಕಾರಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗ ನೋಟಿಸ್ ನೀಡಿದೆ.
ಯಾವುದೇ ಪ್ರತಿನಿಧಿ ಕಳುಹಿಸದೇ ನಂ.6 ರಂದು ನೇರವಾಗಿ ವಿಚಾರಣೆಗೆ ಕುಲಪತಿ ಮತ್ತು ಕುಲಸಚಿವರೇ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗವು ಹೇಳಿದೆ. ಕುಲಪತಿಯೊಬ್ಬರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದು ಇದೇ ಮೊದಲು ಎನ್ನಲಾಗಿದೆ.
ಇಲ್ಲಿನ ವಿಜಯನಗರದ ನಿವಾಸಿ ಆರ್.ಎನ್.ಸತ್ಯನಾರಾಯಣ ಎಂಬುವವರು 2024ರ ಮೇ.6ರಂದು, ಆರ್ಟಿಐ ಅಡಿಯಲ್ಲಿ ಕುಲಸಚಿವರ ವಿಭಾಗಕ್ಕೆ 2023ರ ಜ.10ರಿಂದ ಜ.20ರವರೆಗೆ ಬಂದಿರುವ ಅಂಚೆ ಅಥವಾ ಖುದ್ದಾಗಿ ಬಂದ ಪತ್ರಗಳ ಸ್ವೀಕೃತಿಯ ದಾಖಲಾತಿ ಪುಸ್ತಕದ ದೃಢೀಕೃತ ಪ್ರತಿಗಳನ್ನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವೂ ಯಾವ ಉತ್ತರವನ್ನು ನೀಡಿರಲಿಲ್ಲ.
ಅರ್ಜಿದಾರರು 2024ರ ಜುಲೈ 7ರಂದು ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದೆ ಕಚೇರಿಗೆ ಅಲೆದಾಡಿಸಿದ್ದಾರೆಂದು ಮೇಲ್ಮನವಿ ಪ್ರಾಧಿಕರಕ್ಕೆ ದೂರು ಸಲ್ಲಿಸಿದ್ದರು. ಬಳಿಕ ವಿಶ್ವವಿದ್ಯಾನಿಲಯದವರು ಈ ಬಗ್ಗೆ ಮಾಹಿತಿ ನೀಡಲು ಆಗುವುದಿಲ್ಲವೆಂಬಂತೆ ತಿಳಿಸಿದ್ದರು. ಆದರೆ, ವಿವಿ ಅವರು ಯಾವ ನಿಯಮದಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿರಲಿಲ್ಲ. ಹೀಗಾಗಿ ಇದನ್ನು ಪ್ರಶ್ನಿಸಿ ಸತ್ಯನಾರಾಯಣ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಆಧಾರದ ಮೇರೆಗೆ ರಾಜ್ಯ ಮಾಹಿತಿ ಆಯೋಗವೂ ಕುಲಪತಿ ಹಾಗೂ ಕುಲಸಚಿವರಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಜೊತೆಗೆ ಸಾರ್ಜನಿಕ ಮಾಹಿತಿ ಅಧಿಕಾರಿಯ ಹೆಸರು ಹಾಗೂ ವಿಳಾಸವನ್ನು ಕಡ್ಡಾಯವಾಗಿ ತರುವಂತೆಯೂ ಸೂಚಿಸಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…