ಮೈಸೂರು: ಆರ್ಟಿಐ ಅರ್ಜಿದಾರರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಕಾರಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗ ನೋಟಿಸ್ ನೀಡಿದೆ.
ಯಾವುದೇ ಪ್ರತಿನಿಧಿ ಕಳುಹಿಸದೇ ನಂ.6 ರಂದು ನೇರವಾಗಿ ವಿಚಾರಣೆಗೆ ಕುಲಪತಿ ಮತ್ತು ಕುಲಸಚಿವರೇ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗವು ಹೇಳಿದೆ. ಕುಲಪತಿಯೊಬ್ಬರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದು ಇದೇ ಮೊದಲು ಎನ್ನಲಾಗಿದೆ.
ಇಲ್ಲಿನ ವಿಜಯನಗರದ ನಿವಾಸಿ ಆರ್.ಎನ್.ಸತ್ಯನಾರಾಯಣ ಎಂಬುವವರು 2024ರ ಮೇ.6ರಂದು, ಆರ್ಟಿಐ ಅಡಿಯಲ್ಲಿ ಕುಲಸಚಿವರ ವಿಭಾಗಕ್ಕೆ 2023ರ ಜ.10ರಿಂದ ಜ.20ರವರೆಗೆ ಬಂದಿರುವ ಅಂಚೆ ಅಥವಾ ಖುದ್ದಾಗಿ ಬಂದ ಪತ್ರಗಳ ಸ್ವೀಕೃತಿಯ ದಾಖಲಾತಿ ಪುಸ್ತಕದ ದೃಢೀಕೃತ ಪ್ರತಿಗಳನ್ನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವೂ ಯಾವ ಉತ್ತರವನ್ನು ನೀಡಿರಲಿಲ್ಲ.
ಅರ್ಜಿದಾರರು 2024ರ ಜುಲೈ 7ರಂದು ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದೆ ಕಚೇರಿಗೆ ಅಲೆದಾಡಿಸಿದ್ದಾರೆಂದು ಮೇಲ್ಮನವಿ ಪ್ರಾಧಿಕರಕ್ಕೆ ದೂರು ಸಲ್ಲಿಸಿದ್ದರು. ಬಳಿಕ ವಿಶ್ವವಿದ್ಯಾನಿಲಯದವರು ಈ ಬಗ್ಗೆ ಮಾಹಿತಿ ನೀಡಲು ಆಗುವುದಿಲ್ಲವೆಂಬಂತೆ ತಿಳಿಸಿದ್ದರು. ಆದರೆ, ವಿವಿ ಅವರು ಯಾವ ನಿಯಮದಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿರಲಿಲ್ಲ. ಹೀಗಾಗಿ ಇದನ್ನು ಪ್ರಶ್ನಿಸಿ ಸತ್ಯನಾರಾಯಣ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಆಧಾರದ ಮೇರೆಗೆ ರಾಜ್ಯ ಮಾಹಿತಿ ಆಯೋಗವೂ ಕುಲಪತಿ ಹಾಗೂ ಕುಲಸಚಿವರಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಜೊತೆಗೆ ಸಾರ್ಜನಿಕ ಮಾಹಿತಿ ಅಧಿಕಾರಿಯ ಹೆಸರು ಹಾಗೂ ವಿಳಾಸವನ್ನು ಕಡ್ಡಾಯವಾಗಿ ತರುವಂತೆಯೂ ಸೂಚಿಸಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…