ಮೈಸೂರು: ಆರ್ಟಿಐ ಅರ್ಜಿದಾರರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಕಾರಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗ ನೋಟಿಸ್ ನೀಡಿದೆ.
ಯಾವುದೇ ಪ್ರತಿನಿಧಿ ಕಳುಹಿಸದೇ ನಂ.6 ರಂದು ನೇರವಾಗಿ ವಿಚಾರಣೆಗೆ ಕುಲಪತಿ ಮತ್ತು ಕುಲಸಚಿವರೇ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗವು ಹೇಳಿದೆ. ಕುಲಪತಿಯೊಬ್ಬರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದು ಇದೇ ಮೊದಲು ಎನ್ನಲಾಗಿದೆ.
ಇಲ್ಲಿನ ವಿಜಯನಗರದ ನಿವಾಸಿ ಆರ್.ಎನ್.ಸತ್ಯನಾರಾಯಣ ಎಂಬುವವರು 2024ರ ಮೇ.6ರಂದು, ಆರ್ಟಿಐ ಅಡಿಯಲ್ಲಿ ಕುಲಸಚಿವರ ವಿಭಾಗಕ್ಕೆ 2023ರ ಜ.10ರಿಂದ ಜ.20ರವರೆಗೆ ಬಂದಿರುವ ಅಂಚೆ ಅಥವಾ ಖುದ್ದಾಗಿ ಬಂದ ಪತ್ರಗಳ ಸ್ವೀಕೃತಿಯ ದಾಖಲಾತಿ ಪುಸ್ತಕದ ದೃಢೀಕೃತ ಪ್ರತಿಗಳನ್ನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವೂ ಯಾವ ಉತ್ತರವನ್ನು ನೀಡಿರಲಿಲ್ಲ.
ಅರ್ಜಿದಾರರು 2024ರ ಜುಲೈ 7ರಂದು ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದೆ ಕಚೇರಿಗೆ ಅಲೆದಾಡಿಸಿದ್ದಾರೆಂದು ಮೇಲ್ಮನವಿ ಪ್ರಾಧಿಕರಕ್ಕೆ ದೂರು ಸಲ್ಲಿಸಿದ್ದರು. ಬಳಿಕ ವಿಶ್ವವಿದ್ಯಾನಿಲಯದವರು ಈ ಬಗ್ಗೆ ಮಾಹಿತಿ ನೀಡಲು ಆಗುವುದಿಲ್ಲವೆಂಬಂತೆ ತಿಳಿಸಿದ್ದರು. ಆದರೆ, ವಿವಿ ಅವರು ಯಾವ ನಿಯಮದಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿರಲಿಲ್ಲ. ಹೀಗಾಗಿ ಇದನ್ನು ಪ್ರಶ್ನಿಸಿ ಸತ್ಯನಾರಾಯಣ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಆಧಾರದ ಮೇರೆಗೆ ರಾಜ್ಯ ಮಾಹಿತಿ ಆಯೋಗವೂ ಕುಲಪತಿ ಹಾಗೂ ಕುಲಸಚಿವರಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಜೊತೆಗೆ ಸಾರ್ಜನಿಕ ಮಾಹಿತಿ ಅಧಿಕಾರಿಯ ಹೆಸರು ಹಾಗೂ ವಿಳಾಸವನ್ನು ಕಡ್ಡಾಯವಾಗಿ ತರುವಂತೆಯೂ ಸೂಚಿಸಿದೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…