ಮೈಸೂರು

ಮಾಹಿತಿ ನೀಡದ ಕೆಎಸ್‌ಒಯು: ಮುಕ್ತ ವಿವಿ ಕುಲಪತಿಗೆ ಮಾಹಿತಿ ಆಯೋಗ ನೋಟಿಸ್

ಮೈಸೂರು: ಆರ್‌ಟಿಐ ಅರ್ಜಿದಾರರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಕಾರಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗ ನೋಟಿಸ್‌ ನೀಡಿದೆ.

ಯಾವುದೇ ಪ್ರತಿನಿಧಿ ಕಳುಹಿಸದೇ ನಂ.6 ರಂದು ನೇರವಾಗಿ ವಿಚಾರಣೆಗೆ ಕುಲಪತಿ ಮತ್ತು ಕುಲಸಚಿವರೇ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗವು  ಹೇಳಿದೆ. ಕುಲಪತಿಯೊಬ್ಬರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿರುವುದು ಇದೇ ಮೊದಲು ಎನ್ನಲಾಗಿದೆ.

ಇಲ್ಲಿನ ವಿಜಯನಗರದ ನಿವಾಸಿ ಆರ್.‌ಎನ್‌.ಸತ್ಯನಾರಾಯಣ ಎಂಬುವವರು 2024ರ ಮೇ.6ರಂದು, ಆರ್‌ಟಿಐ ಅಡಿಯಲ್ಲಿ ಕುಲಸಚಿವರ ವಿಭಾಗಕ್ಕೆ 2023ರ ಜ.10ರಿಂದ ಜ.20ರವರೆಗೆ ಬಂದಿರುವ ಅಂಚೆ ಅಥವಾ ಖುದ್ದಾಗಿ ಬಂದ ಪತ್ರಗಳ ಸ್ವೀಕೃತಿಯ ದಾಖಲಾತಿ ಪುಸ್ತಕದ ದೃಢೀಕೃತ ಪ್ರತಿಗಳನ್ನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವೂ ಯಾವ ಉತ್ತರವನ್ನು ನೀಡಿರಲಿಲ್ಲ.

ಅರ್ಜಿದಾರರು 2024ರ ಜುಲೈ 7ರಂದು ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದೆ ಕಚೇರಿಗೆ ಅಲೆದಾಡಿಸಿದ್ದಾರೆಂದು ಮೇಲ್ಮನವಿ ಪ್ರಾಧಿಕರಕ್ಕೆ ದೂರು ಸಲ್ಲಿಸಿದ್ದರು. ಬಳಿಕ ವಿಶ್ವವಿದ್ಯಾನಿಲಯದವರು ಈ ಬಗ್ಗೆ ಮಾಹಿತಿ ನೀಡಲು ಆಗುವುದಿಲ್ಲವೆಂಬಂತೆ ತಿಳಿಸಿದ್ದರು. ಆದರೆ, ವಿವಿ ಅವರು ಯಾವ ನಿಯಮದಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿರಲಿಲ್ಲ. ಹೀಗಾಗಿ ಇದನ್ನು ಪ್ರಶ್ನಿಸಿ ಸತ್ಯನಾರಾಯಣ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಆಧಾರದ ಮೇರೆಗೆ ರಾಜ್ಯ ಮಾಹಿತಿ ಆಯೋಗವೂ ಕುಲಪತಿ ಹಾಗೂ ಕುಲಸಚಿವರಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಜೊತೆಗೆ ಸಾರ್ಜನಿಕ ಮಾಹಿತಿ ಅಧಿಕಾರಿಯ ಹೆಸರು ಹಾಗೂ ವಿಳಾಸವನ್ನು ಕಡ್ಡಾಯವಾಗಿ ತರುವಂತೆಯೂ ಸೂಚಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago