ಮೈಸೂರು

ಸಾರಿಗೆ ಬಸ್‌ನ ಟೈರ್ ಬ್ಲಾಸ್ಟ್: ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ.

ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ ಶಾಯಿದಬಾನು ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಬೇಗೂರಿನಿಂದ ಹೆಡಿಯಾಲ ಮಾರ್ಗವಾಗಿ ಎಚ್.ಡಿ.ಕೋಟೆಗೆ ತೆರಳುತ್ತಿದ್ದ ಬಸ್‌ ಇದಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ‌.

ಹೆಡಿಯಾಲ ಗ್ರಾಮದ ಗ್ರಾಪ ಮಾಜಿ ಅಧ್ಯಕ್ಷ ನೇಮತ್ ಉಲ್ಲಾಖಾನ್ ಮತ್ತು ಸ್ನೇಹಿತರು ಗಾಯಗೊಂಡ ಪ್ರಯಾಣಿಕರನ್ನು ಖಾಸಗಿ ಆಸ್ಪತ್ರೆ ಹಾಗೂ ಸರಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸಾರಿಗೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗುಜರಿಗೆ ಹಾಕುವ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸಲಾಗಿದೆ. ಹೆಡಿಯಾಲ ಗಡಿ ಭಾಗವಾಗಿರುವ ದೆಸೆಯಿಂದ ದಿನನಿತ್ಯ ಸರ್ಕಾರಿ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ. ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಮಾಡಿರುವ ದೆಸೆಯಿಂದ ಅತಿ ಹೆಚ್ಚು ಮಹಿಳಾ ಪ್ರಯಾಣಿಕರೇ ಸಂಚರಿಸುತ್ತಿದ್ದಾರೆ. ಸಾರಿಗೆ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಸುಸಜ್ಜಿತ ಬಸ್ಸುಗಳನ್ನು ಕಲ್ಪಿಸಬೇಕಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಘಟನೆ ಪ್ರತ್ಯಕ್ಷದರ್ಶಿ ನೇಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

6 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

7 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

7 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

7 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

7 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

7 hours ago