KSRTC bus tire blast: More than ten passengers injured
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ.
ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ ಶಾಯಿದಬಾನು ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.
ಬೇಗೂರಿನಿಂದ ಹೆಡಿಯಾಲ ಮಾರ್ಗವಾಗಿ ಎಚ್.ಡಿ.ಕೋಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಹೆಡಿಯಾಲ ಗ್ರಾಮದ ಗ್ರಾಪ ಮಾಜಿ ಅಧ್ಯಕ್ಷ ನೇಮತ್ ಉಲ್ಲಾಖಾನ್ ಮತ್ತು ಸ್ನೇಹಿತರು ಗಾಯಗೊಂಡ ಪ್ರಯಾಣಿಕರನ್ನು ಖಾಸಗಿ ಆಸ್ಪತ್ರೆ ಹಾಗೂ ಸರಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸಾರಿಗೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗುಜರಿಗೆ ಹಾಕುವ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸಲಾಗಿದೆ. ಹೆಡಿಯಾಲ ಗಡಿ ಭಾಗವಾಗಿರುವ ದೆಸೆಯಿಂದ ದಿನನಿತ್ಯ ಸರ್ಕಾರಿ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ. ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಮಾಡಿರುವ ದೆಸೆಯಿಂದ ಅತಿ ಹೆಚ್ಚು ಮಹಿಳಾ ಪ್ರಯಾಣಿಕರೇ ಸಂಚರಿಸುತ್ತಿದ್ದಾರೆ. ಸಾರಿಗೆ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಸುಸಜ್ಜಿತ ಬಸ್ಸುಗಳನ್ನು ಕಲ್ಪಿಸಬೇಕಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಘಟನೆ ಪ್ರತ್ಯಕ್ಷದರ್ಶಿ ನೇಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…