KSRTC bus tire blast: More than ten passengers injured
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ.
ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ ಶಾಯಿದಬಾನು ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.
ಬೇಗೂರಿನಿಂದ ಹೆಡಿಯಾಲ ಮಾರ್ಗವಾಗಿ ಎಚ್.ಡಿ.ಕೋಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಹೆಡಿಯಾಲ ಗ್ರಾಮದ ಗ್ರಾಪ ಮಾಜಿ ಅಧ್ಯಕ್ಷ ನೇಮತ್ ಉಲ್ಲಾಖಾನ್ ಮತ್ತು ಸ್ನೇಹಿತರು ಗಾಯಗೊಂಡ ಪ್ರಯಾಣಿಕರನ್ನು ಖಾಸಗಿ ಆಸ್ಪತ್ರೆ ಹಾಗೂ ಸರಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸಾರಿಗೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗುಜರಿಗೆ ಹಾಕುವ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸಲಾಗಿದೆ. ಹೆಡಿಯಾಲ ಗಡಿ ಭಾಗವಾಗಿರುವ ದೆಸೆಯಿಂದ ದಿನನಿತ್ಯ ಸರ್ಕಾರಿ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ. ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಮಾಡಿರುವ ದೆಸೆಯಿಂದ ಅತಿ ಹೆಚ್ಚು ಮಹಿಳಾ ಪ್ರಯಾಣಿಕರೇ ಸಂಚರಿಸುತ್ತಿದ್ದಾರೆ. ಸಾರಿಗೆ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಸುಸಜ್ಜಿತ ಬಸ್ಸುಗಳನ್ನು ಕಲ್ಪಿಸಬೇಕಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಘಟನೆ ಪ್ರತ್ಯಕ್ಷದರ್ಶಿ ನೇಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…