ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು ಕ್ರಮಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಇದು ಹೀಗೆ ಮುಂದುವರಿದರೆ ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಮೈಸೂರು ರಕ್ಷಣಾ ವೇದಿಕೆ ಉಪಾಧ್ಯಕ್ಷ ಕುಮಾರ್ಗೌಡ ಆಕ್ರೋಶ ಹೊರಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿನ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಅವರ ಮೇಲಿರುವ ಗೌರವದಿಂದ ಅಲ್ಲ. ಬದಲಾಗಿ ದೊಡ್ಡವರನ್ನು ಈ ಹಗರಣಗಳಲ್ಲಿ ಸಿಲುಕಿ ಕೊಂಡರೆ ಅಥವಾ ಶಾಮೀಲು ಮಾಡಿಕೊಂಡರೆ ಸಣ್ಣ-ಪುಟ್ಟ ಅವರವರ ವ್ಯವಹಾರಗಳನ್ನು ಅಥವಾ ಧಂಧೆಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು ಎಂಬ ದೂರದೃಷ್ಠಿಯಿಂದ ಹಾಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರಲುಬಹುದು ಎಂದು ಸಂದೇಹ ಹೊರ ಹಾಕಿದರು.
ವಿರೋಧ ಪಕ್ಷಗಳು ಪ್ರಾಧಿಕಾರದ ಹಗರಣವನ್ನು ಬಯಲಿಗಳೆಯದೆ ಕೇವಲ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ವಿರೋಧ ಪಕ್ಷಗಳ ಸಣ್ಣತನ ಮತ್ತು ರಾಜಕೀಯ ಮೇಲಾಟ ಕಾಣಿಸುತ್ತಿದೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.
ಮುಡಾ ಹಗರಣ ಸಂಬಂಧಿಸಿದಂತೆ ಅಧಿಕಾರಗಳ ಮೇಲೆ ಲೋಕಾಯುಕ್ತ ಸೇರಿದಂತೆ ಆಯಾಯ ಇಲಾಖೆಗಳಿಗೆ ದೂರು ಸಲ್ಲಿಸಿ, ಕ್ರಮಕೈಗೊಳ್ಳುವಂತೆ ದೂರು ನೀಡುತ್ತೇವೆ. ಒಂದು ವೇಲೆ ಈ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ವೇದಿಕೆಯು ನ್ಯಾಯಾಲಯದ ಮೆಟ್ಟಿಲೇರಲು ಸಿದ್ದರಿದ್ದೇವೆ ಎಂದು ಆಡಳಿತ ಪಕ್ಷಕ್ಕೆ ತಿಳಿಸಿದರು.
ಈ ಮೂಡಾ ಹಗರಣದಲ್ಲಿ ನೇರ ಪಾತ್ರಧಾರಿಗಳಾಗಿರುವ ಇಬ್ಬರು ಆಯುಕ್ತರನ್ನು ಈ ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಅಥವಾ ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ. ಸರ್ಕಾರ ನೇಮಿಸಿರುವ ತನಿಖಾ ಸಂಸ್ಥೆ ವರದಿ ನೀಡುವ ತನಕ ಈ ಅಧಿಕಾರಿಗಳಿಗೆ ವೇತನ ನೀಡದಂತೆ ಹಾಗೂ ಯಾವುದೇ ರೀತಿಯ ಸ್ಥಳ ನಿಯೋಜನೆ ಮಾಡಬಾರದೆಂದು ಒತ್ತಾಯಿಸಿದರು.
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…
ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…
ಮಹಾದೇಶ್ ಎಂ.ಗೌಡ ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ ಹನೂರು: ತಾಲ್ಲೂಕಿನ ಕಾವೇರಿ…