ಮೈಸೂರು

ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ: ಕುಮಾರ್‌ಗೌಡ

ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು ಕ್ರಮಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಇದು ಹೀಗೆ ಮುಂದುವರಿದರೆ ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಮೈಸೂರು ರಕ್ಷಣಾ ವೇದಿಕೆ ಉಪಾಧ್ಯಕ್ಷ ಕುಮಾರ್‌ಗೌಡ ಆಕ್ರೋಶ ಹೊರಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿನ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಅವರ ಮೇಲಿರುವ ಗೌರವದಿಂದ ಅಲ್ಲ. ಬದಲಾಗಿ ದೊಡ್ಡವರನ್ನು ಈ ಹಗರಣಗಳಲ್ಲಿ ಸಿಲುಕಿ ಕೊಂಡರೆ ಅಥವಾ ಶಾಮೀಲು ಮಾಡಿಕೊಂಡರೆ ಸಣ್ಣ-ಪುಟ್ಟ ಅವರವರ ವ್ಯವಹಾರಗಳನ್ನು ಅಥವಾ ಧಂಧೆಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು ಎಂಬ ದೂರದೃಷ್ಠಿಯಿಂದ ಹಾಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರಲುಬಹುದು ಎಂದು ಸಂದೇಹ ಹೊರ ಹಾಕಿದರು.

ವಿರೋಧ ಪಕ್ಷಗಳು ಪ್ರಾಧಿಕಾರದ ಹಗರಣವನ್ನು ಬಯಲಿಗಳೆಯದೆ ಕೇವಲ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ವಿರೋಧ ಪಕ್ಷಗಳ ಸಣ್ಣತನ ಮತ್ತು ರಾಜಕೀಯ ಮೇಲಾಟ ಕಾಣಿಸುತ್ತಿದೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.

ಮುಡಾ ಹಗರಣ ಸಂಬಂಧಿಸಿದಂತೆ ಅಧಿಕಾರಗಳ ಮೇಲೆ ಲೋಕಾಯುಕ್ತ ಸೇರಿದಂತೆ ಆಯಾಯ ಇಲಾಖೆಗಳಿಗೆ ದೂರು ಸಲ್ಲಿಸಿ, ಕ್ರಮಕೈಗೊಳ್ಳುವಂತೆ ದೂರು ನೀಡುತ್ತೇವೆ. ಒಂದು ವೇಲೆ ಈ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ವೇದಿಕೆಯು ನ್ಯಾಯಾಲಯದ ಮೆಟ್ಟಿಲೇರಲು ಸಿದ್ದರಿದ್ದೇವೆ ಎಂದು ಆಡಳಿತ ಪಕ್ಷಕ್ಕೆ ತಿಳಿಸಿದರು.

ಈ ಮೂಡಾ ಹಗರಣದಲ್ಲಿ ನೇರ ಪಾತ್ರಧಾರಿಗಳಾಗಿರುವ ಇಬ್ಬರು ಆಯುಕ್ತರನ್ನು ಈ ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಅಥವಾ ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ. ಸರ್ಕಾರ ನೇಮಿಸಿರುವ ತನಿಖಾ ಸಂಸ್ಥೆ ವರದಿ ನೀಡುವ ತನಕ ಈ ಅಧಿಕಾರಿಗಳಿಗೆ ವೇತನ ನೀಡದಂತೆ ಹಾಗೂ ಯಾವುದೇ ರೀತಿಯ ಸ್ಥಳ ನಿಯೋಜನೆ ಮಾಡಬಾರದೆಂದು ಒತ್ತಾಯಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

3 mins ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

31 mins ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

4 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

4 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

6 hours ago