ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು ಕ್ರಮಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಇದು ಹೀಗೆ ಮುಂದುವರಿದರೆ ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಮೈಸೂರು ರಕ್ಷಣಾ ವೇದಿಕೆ ಉಪಾಧ್ಯಕ್ಷ ಕುಮಾರ್ಗೌಡ ಆಕ್ರೋಶ ಹೊರಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿನ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಅವರ ಮೇಲಿರುವ ಗೌರವದಿಂದ ಅಲ್ಲ. ಬದಲಾಗಿ ದೊಡ್ಡವರನ್ನು ಈ ಹಗರಣಗಳಲ್ಲಿ ಸಿಲುಕಿ ಕೊಂಡರೆ ಅಥವಾ ಶಾಮೀಲು ಮಾಡಿಕೊಂಡರೆ ಸಣ್ಣ-ಪುಟ್ಟ ಅವರವರ ವ್ಯವಹಾರಗಳನ್ನು ಅಥವಾ ಧಂಧೆಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು ಎಂಬ ದೂರದೃಷ್ಠಿಯಿಂದ ಹಾಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರಲುಬಹುದು ಎಂದು ಸಂದೇಹ ಹೊರ ಹಾಕಿದರು.
ವಿರೋಧ ಪಕ್ಷಗಳು ಪ್ರಾಧಿಕಾರದ ಹಗರಣವನ್ನು ಬಯಲಿಗಳೆಯದೆ ಕೇವಲ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ವಿರೋಧ ಪಕ್ಷಗಳ ಸಣ್ಣತನ ಮತ್ತು ರಾಜಕೀಯ ಮೇಲಾಟ ಕಾಣಿಸುತ್ತಿದೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.
ಮುಡಾ ಹಗರಣ ಸಂಬಂಧಿಸಿದಂತೆ ಅಧಿಕಾರಗಳ ಮೇಲೆ ಲೋಕಾಯುಕ್ತ ಸೇರಿದಂತೆ ಆಯಾಯ ಇಲಾಖೆಗಳಿಗೆ ದೂರು ಸಲ್ಲಿಸಿ, ಕ್ರಮಕೈಗೊಳ್ಳುವಂತೆ ದೂರು ನೀಡುತ್ತೇವೆ. ಒಂದು ವೇಲೆ ಈ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ವೇದಿಕೆಯು ನ್ಯಾಯಾಲಯದ ಮೆಟ್ಟಿಲೇರಲು ಸಿದ್ದರಿದ್ದೇವೆ ಎಂದು ಆಡಳಿತ ಪಕ್ಷಕ್ಕೆ ತಿಳಿಸಿದರು.
ಈ ಮೂಡಾ ಹಗರಣದಲ್ಲಿ ನೇರ ಪಾತ್ರಧಾರಿಗಳಾಗಿರುವ ಇಬ್ಬರು ಆಯುಕ್ತರನ್ನು ಈ ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಅಥವಾ ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ. ಸರ್ಕಾರ ನೇಮಿಸಿರುವ ತನಿಖಾ ಸಂಸ್ಥೆ ವರದಿ ನೀಡುವ ತನಕ ಈ ಅಧಿಕಾರಿಗಳಿಗೆ ವೇತನ ನೀಡದಂತೆ ಹಾಗೂ ಯಾವುದೇ ರೀತಿಯ ಸ್ಥಳ ನಿಯೋಜನೆ ಮಾಡಬಾರದೆಂದು ಒತ್ತಾಯಿಸಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…