ಮೈಸೂರು

ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ: ಕುಮಾರ್‌ಗೌಡ

ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು ಕ್ರಮಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಇದು ಹೀಗೆ ಮುಂದುವರಿದರೆ ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಮೈಸೂರು ರಕ್ಷಣಾ ವೇದಿಕೆ ಉಪಾಧ್ಯಕ್ಷ ಕುಮಾರ್‌ಗೌಡ ಆಕ್ರೋಶ ಹೊರಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿನ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಅವರ ಮೇಲಿರುವ ಗೌರವದಿಂದ ಅಲ್ಲ. ಬದಲಾಗಿ ದೊಡ್ಡವರನ್ನು ಈ ಹಗರಣಗಳಲ್ಲಿ ಸಿಲುಕಿ ಕೊಂಡರೆ ಅಥವಾ ಶಾಮೀಲು ಮಾಡಿಕೊಂಡರೆ ಸಣ್ಣ-ಪುಟ್ಟ ಅವರವರ ವ್ಯವಹಾರಗಳನ್ನು ಅಥವಾ ಧಂಧೆಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು ಎಂಬ ದೂರದೃಷ್ಠಿಯಿಂದ ಹಾಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರಲುಬಹುದು ಎಂದು ಸಂದೇಹ ಹೊರ ಹಾಕಿದರು.

ವಿರೋಧ ಪಕ್ಷಗಳು ಪ್ರಾಧಿಕಾರದ ಹಗರಣವನ್ನು ಬಯಲಿಗಳೆಯದೆ ಕೇವಲ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ವಿರೋಧ ಪಕ್ಷಗಳ ಸಣ್ಣತನ ಮತ್ತು ರಾಜಕೀಯ ಮೇಲಾಟ ಕಾಣಿಸುತ್ತಿದೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.

ಮುಡಾ ಹಗರಣ ಸಂಬಂಧಿಸಿದಂತೆ ಅಧಿಕಾರಗಳ ಮೇಲೆ ಲೋಕಾಯುಕ್ತ ಸೇರಿದಂತೆ ಆಯಾಯ ಇಲಾಖೆಗಳಿಗೆ ದೂರು ಸಲ್ಲಿಸಿ, ಕ್ರಮಕೈಗೊಳ್ಳುವಂತೆ ದೂರು ನೀಡುತ್ತೇವೆ. ಒಂದು ವೇಲೆ ಈ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ವೇದಿಕೆಯು ನ್ಯಾಯಾಲಯದ ಮೆಟ್ಟಿಲೇರಲು ಸಿದ್ದರಿದ್ದೇವೆ ಎಂದು ಆಡಳಿತ ಪಕ್ಷಕ್ಕೆ ತಿಳಿಸಿದರು.

ಈ ಮೂಡಾ ಹಗರಣದಲ್ಲಿ ನೇರ ಪಾತ್ರಧಾರಿಗಳಾಗಿರುವ ಇಬ್ಬರು ಆಯುಕ್ತರನ್ನು ಈ ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಅಥವಾ ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ. ಸರ್ಕಾರ ನೇಮಿಸಿರುವ ತನಿಖಾ ಸಂಸ್ಥೆ ವರದಿ ನೀಡುವ ತನಕ ಈ ಅಧಿಕಾರಿಗಳಿಗೆ ವೇತನ ನೀಡದಂತೆ ಹಾಗೂ ಯಾವುದೇ ರೀತಿಯ ಸ್ಥಳ ನಿಯೋಜನೆ ಮಾಡಬಾರದೆಂದು ಒತ್ತಾಯಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

10 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

13 hours ago