ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೋ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.
ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ ಎಂದರು.
ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದರು.
ಚುನಾವಣಾ ಫಲಿತಾಂಶಕ್ಕಾಗಿ ಇದನ್ನು ವಿಳಂಬ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಪ್ರಶ್ನೆಯನ್ನು ಬಿಜೆಪಿಯ ಪ್ರಹ್ಲಾದ್ ಜೋಶಿ ಅವರನ್ನು ಕೇಳಿ ಎಂದರು.
ದೇವೇಗೌಡರು ಪ್ರಜ್ವಲ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿರುವ ಬಗ್ಗೆ ಮಾತನಾಡಿ ಇವರಿಗೆ ಗೊತ್ತಿಲ್ಲದೆ ಪ್ರಜ್ವಲ ರೇವಣ್ಣ ಹೊರಟು ಹೋಗಿದ್ದಾರಾ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಸಂಪರ್ಕವೂ, ಅಲ್ಲವೋ ಎಂದು ಪ್ರಶ್ನಿಸಿದರು.
ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ;
ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದರು.
ಪರಿಶೀಲನೆ;
ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…