ಮೈಸೂರು

ಬಳ್ಳೆ ಸಾಕಾನೆ ಶಿಬಿರದಲ್ಲಿದ್ದ ಕುಮಾರಸ್ವಾಮಿ ಆನೆ ನಿಧನ

ಅಂತರಸಂತೆ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಸಾಕಾನೆ ಶಿಬಿರದಲ್ಲಿದ್ದ ೪೬ ವಯಸ್ಸಿನ ಕುಮಾರಸ್ವಾಮಿ ಎಂಬ ಸಾಕಾನೆ ಮೃತಪಟ್ಟಿದ್ದು, ಕಾಡಿನ ಒಳಭಾಗದಲ್ಲಿ ಆನೆಯ ಕಳೇಬರ ಪತ್ತೆಯಾಗಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಸಾಕಾನೆ ಶಿಬಿರದ ಕುಮಾರಸ್ವಾಮಿ ಎಂಬ ಸಾಕಾನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ವೇಳೇ ಚಿಕಿತ್ಸೆಯನ್ನೂ ನೀಡಲಾಗಿತ್ತು. ಈ ಸಾಕಾನೆಯನ್ನು ಆಹಾರಕ್ಕಾಗಿ ನಿತ್ಯವೂ ಅರಣ್ಯಕ್ಕೆ ಬಿಡಲಾಗುತ್ತಿತ್ತು. ಈ ವೇಳೆ ಕೆಲದಿನಗಳಿಂದ ಕುಮಾರಸ್ವಾಮಿ ಕಾಡಿನಲ್ಲಿ ನಾಪತ್ತೆಯಾಗಿದ್ದು, ಶಿಬಿರಕ್ಕೆ ಬಾರದಿದ್ದ ಆನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರತಿದಿನ ಕೂಂಬಿಂಗ್ ಕಾರ್ಯಾಚರಣೆ ಮೂಲಕ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಡಿ.ಬಿ.ಕುಪ್ಪೆ ವಲಯದ ಆನೆಕಲ್ಲುದಿಬ್ಬದ ದಾರಿಯ ಅರಣ್ಯ ಪ್ರದೇಶದಲ್ಲಿ ಕುಮಾರಸ್ವಾಮಿ ಆನೆಯ ಮೃತದೇಹ ಪತ್ತೆಯಾಗಿದೆ.

ಆನೆಕಲ್ಲು ದಿಬ್ಬದದಾರಿ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಸಿಬ್ಬಂದಿಗಳು ಎಂದಿನಂತೆ ಗಸ್ತು ಮಾಡುತ್ತಿರುವಾಗ, ಒಂದು ಆನೆಯು ಸತ್ತು ಬಿದ್ದಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡಲಾಗಿ ಅದು ಗಂಡಾನೆಯಾಗಿದ್ದು, ಸದರಿ ಆನೆಯು ಬಳ್ಳೆ ಆನೆ ಶಿಬಿರದ ಕುಮಾರಸ್ವಾಮಿ ಆನೆ ಎಂಬುದು ಗುರುತಿಸಲಾಗಿದೆ ಎಂದು ನಾಗರಹೊಳೆಯ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

೨೦೦೧ರಲ್ಲಿ ಕುಮಾರಸ್ವಾಮಿ ಆನೆಯನ್ನು ಸೆರೆಹಿಡಿಯಲಾಗಿತ್ತು. ಕೂಂಬಿಂಗ್ ಮತ್ತು ಇತರೆ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳಾಗುತ್ತಿತ್ತು ಎಂದು ಅವರು ತಿಳಿಸಿದರು.

ಇನ್ನು ನಿಯಮಾವಳಿಗಳಂತೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆನೆಯ ಹೊಟ್ಟೆ ಹಾಗೂ ಸಣ್ಣ ಕರುಳಿನಲ್ಲಿ ಸೋಂಕು ಉಂಟಾಗಿ ಮೃತಪಟ್ಟಿರುವುದಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ತಿಳಿಸಿದರು.

ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ರಂಗಸ್ವಾಮಿ, ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಎಸ್.ಡಿ.ಮಧು ಮುಂತಾದವರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

2 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

2 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

3 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

3 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

3 hours ago