ಅಂತರಸಂತೆ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಸಾಕಾನೆ ಶಿಬಿರದಲ್ಲಿದ್ದ ೪೬ ವಯಸ್ಸಿನ ಕುಮಾರಸ್ವಾಮಿ ಎಂಬ ಸಾಕಾನೆ ಮೃತಪಟ್ಟಿದ್ದು, ಕಾಡಿನ ಒಳಭಾಗದಲ್ಲಿ ಆನೆಯ ಕಳೇಬರ ಪತ್ತೆಯಾಗಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಸಾಕಾನೆ ಶಿಬಿರದ ಕುಮಾರಸ್ವಾಮಿ ಎಂಬ ಸಾಕಾನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ವೇಳೇ ಚಿಕಿತ್ಸೆಯನ್ನೂ ನೀಡಲಾಗಿತ್ತು. ಈ ಸಾಕಾನೆಯನ್ನು ಆಹಾರಕ್ಕಾಗಿ ನಿತ್ಯವೂ ಅರಣ್ಯಕ್ಕೆ ಬಿಡಲಾಗುತ್ತಿತ್ತು. ಈ ವೇಳೆ ಕೆಲದಿನಗಳಿಂದ ಕುಮಾರಸ್ವಾಮಿ ಕಾಡಿನಲ್ಲಿ ನಾಪತ್ತೆಯಾಗಿದ್ದು, ಶಿಬಿರಕ್ಕೆ ಬಾರದಿದ್ದ ಆನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರತಿದಿನ ಕೂಂಬಿಂಗ್ ಕಾರ್ಯಾಚರಣೆ ಮೂಲಕ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಡಿ.ಬಿ.ಕುಪ್ಪೆ ವಲಯದ ಆನೆಕಲ್ಲುದಿಬ್ಬದ ದಾರಿಯ ಅರಣ್ಯ ಪ್ರದೇಶದಲ್ಲಿ ಕುಮಾರಸ್ವಾಮಿ ಆನೆಯ ಮೃತದೇಹ ಪತ್ತೆಯಾಗಿದೆ.
ಆನೆಕಲ್ಲು ದಿಬ್ಬದದಾರಿ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಸಿಬ್ಬಂದಿಗಳು ಎಂದಿನಂತೆ ಗಸ್ತು ಮಾಡುತ್ತಿರುವಾಗ, ಒಂದು ಆನೆಯು ಸತ್ತು ಬಿದ್ದಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡಲಾಗಿ ಅದು ಗಂಡಾನೆಯಾಗಿದ್ದು, ಸದರಿ ಆನೆಯು ಬಳ್ಳೆ ಆನೆ ಶಿಬಿರದ ಕುಮಾರಸ್ವಾಮಿ ಆನೆ ಎಂಬುದು ಗುರುತಿಸಲಾಗಿದೆ ಎಂದು ನಾಗರಹೊಳೆಯ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
೨೦೦೧ರಲ್ಲಿ ಕುಮಾರಸ್ವಾಮಿ ಆನೆಯನ್ನು ಸೆರೆಹಿಡಿಯಲಾಗಿತ್ತು. ಕೂಂಬಿಂಗ್ ಮತ್ತು ಇತರೆ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳಾಗುತ್ತಿತ್ತು ಎಂದು ಅವರು ತಿಳಿಸಿದರು.
ಇನ್ನು ನಿಯಮಾವಳಿಗಳಂತೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆನೆಯ ಹೊಟ್ಟೆ ಹಾಗೂ ಸಣ್ಣ ಕರುಳಿನಲ್ಲಿ ಸೋಂಕು ಉಂಟಾಗಿ ಮೃತಪಟ್ಟಿರುವುದಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ತಿಳಿಸಿದರು.
ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ರಂಗಸ್ವಾಮಿ, ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಎಸ್.ಡಿ.ಮಧು ಮುಂತಾದವರು ಹಾಜರಿದ್ದರು.
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…