ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…