ಮೈಸೂರು

ಕುಂಭಮೇಳ: ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚಿಸಿದ್ದಾರೆ ಎಂದ HD ಕುಮಾರಸ್ವಾಮಿ

ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಸುತ್ತೂರು ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.

ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

59 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

4 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 hours ago