ಮೈಸೂರು

ಸಿದ್ದರಾಮಯ್ಯ ಸಿಎಂ ಆಗಲೇಬೇಕು ಎಂದು ಕುರುಬ ಸ್ವಾಮೀಜಿ ಘರ್ಜಿಸಿರಲಿಲ್ಲವೇ.?: ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಇನ್ನು ಮುಂದೆ ಡಿಕೆಶಿ ಅವರಿಗೆ ಅಧಿಕಾರ ಬಿಟ್ಟು ಕೊಟ್ಟು, ಒಳ್ಳೆಯದಾಗಲೆಂದು ಅರಸಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹೈಕಮಾಂಡ್‌ ಮನಸ್ಸು ಮಾಡಿದರೆ ಶಿವಕುಮಾರ್‌ ಸಿಎಂ ಆಗುತ್ತಾರೆ. ಈ ಹಿಂದೆ ಕಾಂಗ್ರೆಸ್‌ ವೀಕ್‌ ಆಗಿದ್ದಾಗ ಸಿದ್ದರಾಮಯ್ಯ ಸ್ಟ್ರಾಂಗ್‌ ಆಗಿದ್ದರು. ಸದ್ಯ ಕಾಂಗ್ರೆಸ್‌ ಹೈಕಮಾಂಡ್‌ ಶಕ್ತವಾಗಿದ್ದು, ಡಿಕೆಶಿ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದರು.

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಅಥವಾ ಅವರ ಶಾಸಕರು ಯಾರೂ ಹೇಳಿಲ್ಲ. ಶಿವಕುಮಾರ್‌ಗೆ ಅವಕಾಶ ನೀಡುವಂತೆ ಒಕ್ಕಲಿಗ ಸ್ವಾಮೀಜಿ ಅಭಿಮಾನದಿಂದ ಮನವಿ ಮಾಡಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಮಾಧ್ಯಮದಲ್ಲಿ ಬರುತ್ತಲೇ ಇರುತ್ತದೆ. ಅದರ ಆಧಾರದ ಮೇಲೆ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅದು ದೊಡ್ಡ ಅಪರಾಧವಲ್ಲ ಎಂದರು.

ಅಧಿಕಾರವನ್ನು ಹೇಗೆ ಉಳಿಸಿಕೊಳ್ಳಬೇಕು ಎನ್ನುವುದು ಸುದೀರ್ಘ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ ಕರಗತವಾಗಿದೆ. ಅಧಿಕಾರವನ್ನು ತಕ್ಷಣವೇ ಬಿಟ್ಟು ಬಿಡುತ್ತಾರೆ ಎಂದು ನಾನು ಹೇಳುವುದಿಲ್ಲ. ಬಹುಮತವಿರುವ ಈ ಸರ್ಕಾರವನ್ನು ನಾವು ಬೀಳಿಸುವ ಪ್ರಶ್ನೆಯೇ ಇಲ್ಲ. ಅವರ ಪಕ್ಷದಲ್ಲೇ ಆಂತರಿಕ ಕಚ್ಚಾಟ, ಭಿನ್ನಾಭಿಪ್ರಾಯ ಬಂದರೆ ಸರ್ಕಾರ ಬೀಳಬಹುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

7 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

11 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

11 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

11 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

14 hours ago