ಮೈಸೂರು

ಸುಳ್ಳು ಕೊಲೆ ಕೇಸ್‌ ಪ್ರಕರಣ : ಮೂವರು ಪೊಲೀಸರು ಅಮಾನತ್ತು

ಮೈಸೂರು: `ಕೊಲೆಯಾಗಿದ್ದ’ ಪತ್ನಿ ಜೀವಂತವಾಗಿ ಪತ್ತೆಯಾಗಿದ ಕುಶಾಲನಗರದ ಸುರೇಶ್ ಪ್ರಕರಣಕ್ಕೆ ಸಂಬಂದಿಸಿದಂತೆ ಅಂದಿನ ತನಿಖಾಧಿಕಾರಿಗಳಾದ ಮೂವರು ಪೊಲೀಸ್ ಅಧಿಕಾರಿಗಳನ್ನು ಪೊಲೀಸ್ ಇಲಾಖೆ ಅಮಾನತ್ತುಗೊಳಿಸಿದೆ.

ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಸದ್ಯ ಕುಶಾಲನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಜಿ.ಪ್ರಕಾಶ್, ಇಲವಾಲ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಬ್ ಇನ್‌ಸ್ಪೆಕ್ಟರ್ ಮಹೇಶ್ ಕುಮಾರ್ ಮತ್ತು ಜಯಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕಾಶ್ ಯತ್ತಿನಮನಿ ಅವರುಗಳನ್ನು ಇಲಾಖೆ ಅಮಾನತ್ತುಗೊಳಿಸಿದೆ.

ನಿರ್ಲಕ್ಷ್ಯ, ಕರ್ತವ್ಯ ಲೋಪ, ಸಾಕ್ಷ್ಯಾಧಾರಗಳ ರಚನೆ, ನ್ಯಾಯಾಲಯಕ್ಕೆ ಸುಳ್ಳು ಆರೋಪಪಟ್ಟಿ ಸಲ್ಲಿಸುವುದು ಮತ್ತು ತನಿಖೆಯಲ್ಲಿ ದೋಷಪೂರಿತ ಮತ್ತು ಅಸಡ್ಡೆ ತೋರಿದ ಆರೋಪದ ಮೇಲೆ ಅವರುಗಳನ್ನು ಅಮಾನತುಗೊಳಿಸಲಾಗಿದೆ.

ಜೂ.೨೮ ರಂದು ದಕ್ಷಿಣ ವಲಯ ಐಜಿಪಿ ಡಾ.ಎಂ.ಬಿ. ಬೋರಲಿಂಗಯ್ಯ ಅವರು ಅಮಾನತು ಆದೇಶವನ್ನು ಹೊರಡಿಸಿದ್ದು, ಅಮಾನತುಗೊಂಡ ಅಧಿಕಾರಿಗಳಿಗೆ ಭಾನುವಾರ ಅಧಿಕೃತವಾಗಿ ಅಮಾನತ್ತುಗೊಳಿಸಿರುವ ಆದೇಶಗಳನ್ನು ನೀಡಲಾಗಿದೆ. ಇದೇ ವೇಳೆ ಮೂವರ ವಿರುದ್ಧ ಇಲಾಖಾ ವಿಚಾರಣೆಗೂ ಆದೇಶಿಸಲಾಗಿದೆ.

ಪ್ರಕರಣಕ್ಕೆ ಸಂಬಂದಿಸಿದಂತೆ ಮಾಹಿತಿ ಪಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಷರಶಃ ಬೇಸರಗೊಂಡಿದ್ದರು ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂದಿಸಿದಂತೆ ಕರ್ತವ್ಯಲೋಪ ಎಸಗಿರುವವರನ್ನು ಕೂಡಲೇ ಅಮಾನತ್ತುಗೊಳಿಸಿ ತನಿಖೆ ನಡೆಸುವಂತೆ ಐಜಿಪಿಗೆ ಮೌಖಿಕ ಸೂಚನೆಗಳನ್ನು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಕೊಡಗಿನ ಕುಶಾಲನಗರದ ಬಸವನಹಳ್ಳಿಯ ಬುಡಕಟ್ಟು ನಿವಾಸಿ ಸುರೇಶ್ ಅವರ ಪತ್ನಿ ವಿವಾಹವಾದ ೧೮ ವರ್ಷಗಳ ನಂತರ ನಾಪತ್ತೆಯಾಗಿದ್ದರು. ಈ ಸಂಬಂದ ಸುರೇಶ್ ಕುಶಾಲನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಆರಂಭಿಕ ತನಿಖೆಯ ಹೊರತಾಗಿಯೂ, ನಂತರ ಪ್ರಕರಣದ ತನಿಖೆ ವೇಗ ಕಳೆದುಕೊಂಡಿತ್ತು. ಅದಾದ ಏಳು ತಿಂಗಳ ನಂತರ, ಜೂನ್ ೨೦೨೧ ರಲ್ಲಿ, ಪಿರಿಯಾಪಟ್ಟಣದ ಬೆಟ್ಟದಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪತ್ತೆಯಾದ ಮಹಿಳೆಯ ಅಸ್ಥಿಪಂಜರವನ್ನು ಗುರುತಿಸಲು ಸುರೇಶ್ ಅವರನ್ನು ಕರೆತಂದರು.

ಅಸ್ಥಿಪಂಜರದ ಅವಶೇಷಗಳು, ಬಟ್ಟೆಗಳು ಮತ್ತು ಚಪ್ಪಲಿಗಳು ಕಾಣೆಯಾದ ತನ್ನ ಹೆಂಡತಿಯದ್ದಾಗಿವೆ ಎಂದು ಗುರುತಿಸಲು ಅವನನ್ನು ಒತ್ತಾಯಿಸಿದ್ದರು. ಪೊಲೀಸರ ಬಲವಂತದ ಮೇರೆಗೆ, ಆಕೆಯ ಕೊಲೆಯನ್ನು ಒಪ್ಪಿಕೊಳ್ಳುವಂತೆ ಮಾಡಲಾಗಿತ್ತು.

ನಂತರ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು ಮತ್ತು ಸುರೇಶ್ ಅವರನ್ನು ಬಂಧಿಸಲಾಯಿತು. ಹೈಕೋರ್ಟ್‌ನಿಂದ ಜಾಮೀನು ಪಡೆಯುವ ಮೊದಲು ಅವರು ಎರಡು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು.

ನಂತರ ನಡೆದ ನಾಟಕೀಯ ತಿರುವೊಂದರಲ್ಲಿ, ಏಪ್ರಿಲ್ ೧, ೨೦೨೫ ರಂದು, ಸುರೇಶ್ ಅವರ ಸ್ನೇಹಿತರು ಅವರ ಪತ್ನಿ ಮಲ್ಲಿಗೆಯನ್ನು ಜೀವಂತವಾಗಿ ನೋಡಿದ್ದರು. ಆಕೆಯ ಪ್ರಿಯಕರನೊಂದಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಇದ್ದರು. ಇದರಿಂದ ಎಚ್ಚರಗೊಂಡ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದಿದ್ದರು.

ವಿಚಾರಣೆಯ ಸಮಯದಲ್ಲಿ, ಅವಳು ಕಳೆದ ಐದು ವರ್ಷಗಳಿಂದ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಗಣೇಶ್ ಜೊತೆ ವಾಸಿಸುತ್ತಿರುವುದಾಗಿ ಒಪ್ಪಿಕೊಂಡಳು. ಆಕೆಯ ಪತ್ತೆಯಿಂದಾಗಿ ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ಅಕ್ಷರಶಃ ತಲ್ಲಣಗೊಂಡಿತ್ತು.

ನಂತರ ಸುರೇಶ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿತು. ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ ಒಬ್ಬ ಅಮಾಯಕ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡ ತನಿಖೆಯ ಕ್ಷಮತೆಯ ಬಗ್ಗೆ ನ್ಯಾಯಾಲಯ ಅಸಮಧಾನ ವ್ಯಕ್ತಪಡಿಸಿತ್ತು.

ತನಿಖೆಯ ಸಮಯದಲ್ಲಿ ಸುಳ್ಳುಗಳನ್ನೇ ದಾಖಲು ಮಾಡಿದ್ದ ಇನ್ಸಪೆಕ್ಟರ್ ಬಿ.ಜಿ.ಪ್ರಕಾಶ್ ಬೈಲಕುಪ್ಪೆ ವೃತ್ತದ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಮತ್ತು ಮಹೇಶ್ ಕುಮಾರ್ ಮತ್ತು ಪ್ರಕಾಶ್ ಯಟ್ಟಿನಮನಿ ಬೆಟ್ಟದಪುರ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್‌ಗಳಾಗಿದ್ದರು. ಇದೀಗ ಮೂವರನ್ನೂ ಅಮಾನತ್ತೊಗೊಳಿಸಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago