ಮೈಸೂರು

ಬಿ.ಎಸ್‌.ಯಡಿಯೂರಪ್ಪನವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ: ಎಲ್‌.ನಾಗೇಂದ್ರ

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಯಡಿಯೂರಪ್ಪನವರ ಪಾತ್ರ ಅಪಾರವಾಗಿದೆ. ಅವರ ಬಗ್ಗೆ ಯಾರೇ ಹಗುರವಾಗಿ ಹೇಳಿಕೆ ನೀಡಿದರೂ ನಾವು ಅದನ್ನು ಸಹಿಸುವುದಿಲ್ಲ ಎಂದರು.

ಶಾಸಕ ಯತ್ನಾಳ್‌ ಅವರು ಒಂದು ಕ್ಷೇತ್ರದ ಶಾಸಕರಷ್ಟ, ಈ ಮೊದಲು ನಾನು ಸಹ ಶಾಸಕನಾಗಿದ್ದವನೇ. ಆದರೆ ಶಾಸಕದಲ್ಲಿದ್ದುಕೊಂಡು ಪಕ್ಷಕ್ಕೆ ಅಪಾರ ಕೊಡುಗೆ ನೀಡಿರುವ ಬಿಎಸ್ ವೈ ಬಗ್ಗೆ ಹಾದಿ ಬೀದಿಲಿ ನಿಂತು ಹೇಳಿಕೆಗಳನ್ನು ನೀಡಿದರೆ ಕಾರ್ಯಕರ್ತರಾಗಿ ಸಹಿಸುವುದಿಲ್ಲ. ಪಕ್ಷದ ಮಾನ ಮರ್ಯಾದೆಯನ್ನ ಬೀದಿಯಲ್ಲಿ ಕಳೆಯೋಕೆ ಹೋಗಬೇಡಿ. ಬೇಕಿದ್ದರೇ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಿ ಎಂದು ಹೇಳಿದರು.

ಇನ್ನೂ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ರಾಷ್ಟ್ರೀಯ ನಾಯಕರು. ಹೀಗಿದ್ದರೂ ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಿ ತಮ್ಮ ಮರ್ಯಾದೆಯನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ನಡೆಯಿಂದ ಕಾರ್ಯಕರ್ತರಿಗೆ ಭಾರಿ ನೋವುಂಟಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದಾಗಿ ನಾಳೆ ಚುನಾವಣೆ ಬಂದರೂ ಕೂಡ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿ ಹಾದಿ ಬೀದಿಯಲ್ಲಿ ಗಲಾಟೆ ಮಾಡಿಕೊಂಡು ಕಾರ್ಯಕರ್ತರು ತಲೆ ತಗ್ಗಿಸುವ ಹಾಗೆ ಮಾಡಬೇಡಿ ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

1 min ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

34 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

46 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

52 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

4 hours ago