ಮೈಸೂರು

ಬಿ.ಎಸ್‌.ಯಡಿಯೂರಪ್ಪನವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ: ಎಲ್‌.ನಾಗೇಂದ್ರ

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಯಡಿಯೂರಪ್ಪನವರ ಪಾತ್ರ ಅಪಾರವಾಗಿದೆ. ಅವರ ಬಗ್ಗೆ ಯಾರೇ ಹಗುರವಾಗಿ ಹೇಳಿಕೆ ನೀಡಿದರೂ ನಾವು ಅದನ್ನು ಸಹಿಸುವುದಿಲ್ಲ ಎಂದರು.

ಶಾಸಕ ಯತ್ನಾಳ್‌ ಅವರು ಒಂದು ಕ್ಷೇತ್ರದ ಶಾಸಕರಷ್ಟ, ಈ ಮೊದಲು ನಾನು ಸಹ ಶಾಸಕನಾಗಿದ್ದವನೇ. ಆದರೆ ಶಾಸಕದಲ್ಲಿದ್ದುಕೊಂಡು ಪಕ್ಷಕ್ಕೆ ಅಪಾರ ಕೊಡುಗೆ ನೀಡಿರುವ ಬಿಎಸ್ ವೈ ಬಗ್ಗೆ ಹಾದಿ ಬೀದಿಲಿ ನಿಂತು ಹೇಳಿಕೆಗಳನ್ನು ನೀಡಿದರೆ ಕಾರ್ಯಕರ್ತರಾಗಿ ಸಹಿಸುವುದಿಲ್ಲ. ಪಕ್ಷದ ಮಾನ ಮರ್ಯಾದೆಯನ್ನ ಬೀದಿಯಲ್ಲಿ ಕಳೆಯೋಕೆ ಹೋಗಬೇಡಿ. ಬೇಕಿದ್ದರೇ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಿ ಎಂದು ಹೇಳಿದರು.

ಇನ್ನೂ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ರಾಷ್ಟ್ರೀಯ ನಾಯಕರು. ಹೀಗಿದ್ದರೂ ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಿ ತಮ್ಮ ಮರ್ಯಾದೆಯನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ನಡೆಯಿಂದ ಕಾರ್ಯಕರ್ತರಿಗೆ ಭಾರಿ ನೋವುಂಟಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದಾಗಿ ನಾಳೆ ಚುನಾವಣೆ ಬಂದರೂ ಕೂಡ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿ ಹಾದಿ ಬೀದಿಯಲ್ಲಿ ಗಲಾಟೆ ಮಾಡಿಕೊಂಡು ಕಾರ್ಯಕರ್ತರು ತಲೆ ತಗ್ಗಿಸುವ ಹಾಗೆ ಮಾಡಬೇಡಿ ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

3 hours ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…

3 hours ago

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

4 hours ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

4 hours ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

5 hours ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

6 hours ago