ಮೈಸೂರು

ಬಿ.ಎಸ್‌.ಯಡಿಯೂರಪ್ಪನವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ: ಎಲ್‌.ನಾಗೇಂದ್ರ

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಯಡಿಯೂರಪ್ಪನವರ ಪಾತ್ರ ಅಪಾರವಾಗಿದೆ. ಅವರ ಬಗ್ಗೆ ಯಾರೇ ಹಗುರವಾಗಿ ಹೇಳಿಕೆ ನೀಡಿದರೂ ನಾವು ಅದನ್ನು ಸಹಿಸುವುದಿಲ್ಲ ಎಂದರು.

ಶಾಸಕ ಯತ್ನಾಳ್‌ ಅವರು ಒಂದು ಕ್ಷೇತ್ರದ ಶಾಸಕರಷ್ಟ, ಈ ಮೊದಲು ನಾನು ಸಹ ಶಾಸಕನಾಗಿದ್ದವನೇ. ಆದರೆ ಶಾಸಕದಲ್ಲಿದ್ದುಕೊಂಡು ಪಕ್ಷಕ್ಕೆ ಅಪಾರ ಕೊಡುಗೆ ನೀಡಿರುವ ಬಿಎಸ್ ವೈ ಬಗ್ಗೆ ಹಾದಿ ಬೀದಿಲಿ ನಿಂತು ಹೇಳಿಕೆಗಳನ್ನು ನೀಡಿದರೆ ಕಾರ್ಯಕರ್ತರಾಗಿ ಸಹಿಸುವುದಿಲ್ಲ. ಪಕ್ಷದ ಮಾನ ಮರ್ಯಾದೆಯನ್ನ ಬೀದಿಯಲ್ಲಿ ಕಳೆಯೋಕೆ ಹೋಗಬೇಡಿ. ಬೇಕಿದ್ದರೇ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಿ ಎಂದು ಹೇಳಿದರು.

ಇನ್ನೂ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ರಾಷ್ಟ್ರೀಯ ನಾಯಕರು. ಹೀಗಿದ್ದರೂ ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಿ ತಮ್ಮ ಮರ್ಯಾದೆಯನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ನಡೆಯಿಂದ ಕಾರ್ಯಕರ್ತರಿಗೆ ಭಾರಿ ನೋವುಂಟಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದಾಗಿ ನಾಳೆ ಚುನಾವಣೆ ಬಂದರೂ ಕೂಡ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿ ಹಾದಿ ಬೀದಿಯಲ್ಲಿ ಗಲಾಟೆ ಮಾಡಿಕೊಂಡು ಕಾರ್ಯಕರ್ತರು ತಲೆ ತಗ್ಗಿಸುವ ಹಾಗೆ ಮಾಡಬೇಡಿ ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

44 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

1 hour ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

1 hour ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago