ಮೈಸೂರು

ಬಿ.ಎಸ್‌.ಯಡಿಯೂರಪ್ಪನವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ: ಎಲ್‌.ನಾಗೇಂದ್ರ

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಯಡಿಯೂರಪ್ಪನವರ ಪಾತ್ರ ಅಪಾರವಾಗಿದೆ. ಅವರ ಬಗ್ಗೆ ಯಾರೇ ಹಗುರವಾಗಿ ಹೇಳಿಕೆ ನೀಡಿದರೂ ನಾವು ಅದನ್ನು ಸಹಿಸುವುದಿಲ್ಲ ಎಂದರು.

ಶಾಸಕ ಯತ್ನಾಳ್‌ ಅವರು ಒಂದು ಕ್ಷೇತ್ರದ ಶಾಸಕರಷ್ಟ, ಈ ಮೊದಲು ನಾನು ಸಹ ಶಾಸಕನಾಗಿದ್ದವನೇ. ಆದರೆ ಶಾಸಕದಲ್ಲಿದ್ದುಕೊಂಡು ಪಕ್ಷಕ್ಕೆ ಅಪಾರ ಕೊಡುಗೆ ನೀಡಿರುವ ಬಿಎಸ್ ವೈ ಬಗ್ಗೆ ಹಾದಿ ಬೀದಿಲಿ ನಿಂತು ಹೇಳಿಕೆಗಳನ್ನು ನೀಡಿದರೆ ಕಾರ್ಯಕರ್ತರಾಗಿ ಸಹಿಸುವುದಿಲ್ಲ. ಪಕ್ಷದ ಮಾನ ಮರ್ಯಾದೆಯನ್ನ ಬೀದಿಯಲ್ಲಿ ಕಳೆಯೋಕೆ ಹೋಗಬೇಡಿ. ಬೇಕಿದ್ದರೇ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಿ ಎಂದು ಹೇಳಿದರು.

ಇನ್ನೂ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ರಾಷ್ಟ್ರೀಯ ನಾಯಕರು. ಹೀಗಿದ್ದರೂ ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಿ ತಮ್ಮ ಮರ್ಯಾದೆಯನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ನಡೆಯಿಂದ ಕಾರ್ಯಕರ್ತರಿಗೆ ಭಾರಿ ನೋವುಂಟಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದಾಗಿ ನಾಳೆ ಚುನಾವಣೆ ಬಂದರೂ ಕೂಡ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿ ಹಾದಿ ಬೀದಿಯಲ್ಲಿ ಗಲಾಟೆ ಮಾಡಿಕೊಂಡು ಕಾರ್ಯಕರ್ತರು ತಲೆ ತಗ್ಗಿಸುವ ಹಾಗೆ ಮಾಡಬೇಡಿ ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

11 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

11 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

12 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

13 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

13 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

15 hours ago