ಮೈಸೂರು

ಬಿ.ಎಸ್‌.ಯಡಿಯೂರಪ್ಪನವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ: ಎಲ್‌.ನಾಗೇಂದ್ರ

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಯಡಿಯೂರಪ್ಪನವರ ಪಾತ್ರ ಅಪಾರವಾಗಿದೆ. ಅವರ ಬಗ್ಗೆ ಯಾರೇ ಹಗುರವಾಗಿ ಹೇಳಿಕೆ ನೀಡಿದರೂ ನಾವು ಅದನ್ನು ಸಹಿಸುವುದಿಲ್ಲ ಎಂದರು.

ಶಾಸಕ ಯತ್ನಾಳ್‌ ಅವರು ಒಂದು ಕ್ಷೇತ್ರದ ಶಾಸಕರಷ್ಟ, ಈ ಮೊದಲು ನಾನು ಸಹ ಶಾಸಕನಾಗಿದ್ದವನೇ. ಆದರೆ ಶಾಸಕದಲ್ಲಿದ್ದುಕೊಂಡು ಪಕ್ಷಕ್ಕೆ ಅಪಾರ ಕೊಡುಗೆ ನೀಡಿರುವ ಬಿಎಸ್ ವೈ ಬಗ್ಗೆ ಹಾದಿ ಬೀದಿಲಿ ನಿಂತು ಹೇಳಿಕೆಗಳನ್ನು ನೀಡಿದರೆ ಕಾರ್ಯಕರ್ತರಾಗಿ ಸಹಿಸುವುದಿಲ್ಲ. ಪಕ್ಷದ ಮಾನ ಮರ್ಯಾದೆಯನ್ನ ಬೀದಿಯಲ್ಲಿ ಕಳೆಯೋಕೆ ಹೋಗಬೇಡಿ. ಬೇಕಿದ್ದರೇ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಿ ಎಂದು ಹೇಳಿದರು.

ಇನ್ನೂ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ರಾಷ್ಟ್ರೀಯ ನಾಯಕರು. ಹೀಗಿದ್ದರೂ ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಿ ತಮ್ಮ ಮರ್ಯಾದೆಯನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ನಡೆಯಿಂದ ಕಾರ್ಯಕರ್ತರಿಗೆ ಭಾರಿ ನೋವುಂಟಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದಾಗಿ ನಾಳೆ ಚುನಾವಣೆ ಬಂದರೂ ಕೂಡ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿ ಹಾದಿ ಬೀದಿಯಲ್ಲಿ ಗಲಾಟೆ ಮಾಡಿಕೊಂಡು ಕಾರ್ಯಕರ್ತರು ತಲೆ ತಗ್ಗಿಸುವ ಹಾಗೆ ಮಾಡಬೇಡಿ ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago