ಮೈಸೂರು

ಬಿ.ಎಸ್‌.ಯಡಿಯೂರಪ್ಪನವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ: ಎಲ್‌.ನಾಗೇಂದ್ರ

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಯಡಿಯೂರಪ್ಪನವರ ಪಾತ್ರ ಅಪಾರವಾಗಿದೆ. ಅವರ ಬಗ್ಗೆ ಯಾರೇ ಹಗುರವಾಗಿ ಹೇಳಿಕೆ ನೀಡಿದರೂ ನಾವು ಅದನ್ನು ಸಹಿಸುವುದಿಲ್ಲ ಎಂದರು.

ಶಾಸಕ ಯತ್ನಾಳ್‌ ಅವರು ಒಂದು ಕ್ಷೇತ್ರದ ಶಾಸಕರಷ್ಟ, ಈ ಮೊದಲು ನಾನು ಸಹ ಶಾಸಕನಾಗಿದ್ದವನೇ. ಆದರೆ ಶಾಸಕದಲ್ಲಿದ್ದುಕೊಂಡು ಪಕ್ಷಕ್ಕೆ ಅಪಾರ ಕೊಡುಗೆ ನೀಡಿರುವ ಬಿಎಸ್ ವೈ ಬಗ್ಗೆ ಹಾದಿ ಬೀದಿಲಿ ನಿಂತು ಹೇಳಿಕೆಗಳನ್ನು ನೀಡಿದರೆ ಕಾರ್ಯಕರ್ತರಾಗಿ ಸಹಿಸುವುದಿಲ್ಲ. ಪಕ್ಷದ ಮಾನ ಮರ್ಯಾದೆಯನ್ನ ಬೀದಿಯಲ್ಲಿ ಕಳೆಯೋಕೆ ಹೋಗಬೇಡಿ. ಬೇಕಿದ್ದರೇ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಿ ಎಂದು ಹೇಳಿದರು.

ಇನ್ನೂ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದು ರಾಷ್ಟ್ರೀಯ ನಾಯಕರು. ಹೀಗಿದ್ದರೂ ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಿ ತಮ್ಮ ಮರ್ಯಾದೆಯನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ನಡೆಯಿಂದ ಕಾರ್ಯಕರ್ತರಿಗೆ ಭಾರಿ ನೋವುಂಟಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದಾಗಿ ನಾಳೆ ಚುನಾವಣೆ ಬಂದರೂ ಕೂಡ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಇಂತಹ ಸಂದರ್ಭದಲ್ಲಿ ಹಾದಿ ಬೀದಿಯಲ್ಲಿ ಗಲಾಟೆ ಮಾಡಿಕೊಂಡು ಕಾರ್ಯಕರ್ತರು ತಲೆ ತಗ್ಗಿಸುವ ಹಾಗೆ ಮಾಡಬೇಡಿ ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

2 mins ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

5 mins ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

7 mins ago

ಓದುಗರ ಪತ್ರ: ಕೆರೆಗೆ ಘನತ್ಯಾಜ್ಯ ಸುರಿಯುವುದನ್ನು ತಡೆಗಟ್ಟಿ

ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…

9 mins ago

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…

26 mins ago

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

3 hours ago